4:33 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಾಟಕ ಸ್ಪರ್ಧೆ: ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ‘ನಾಗಮಂಡಲ’ ರಾಜ್ಯಮಟ್ಟಕ್ಕೆ ಆಯ್ಕೆ

27/03/2024, 22:26

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ನಾಟಕ ಸ್ಪರ್ಧೆಯಲ್ಲಿ ಗಿರೀಶ್ ಕಾರ್ನಾಡ ಅವರ ‘ನಾಗ ಮಂಡಲ’ (ಸ್ವತಂತ್ರ ರಂಗಾವಿಷ್ಕಾರ) ನಾಟಕ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮಾ. 19 ಮತ್ತು 20ರಂದು ಮಂಗಳೂರು ಮಿನಿ ವಿಧಾನಸೌಧದ ಬಳಿ ಇರುವ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದಿತ್ತು.

ನಾಟಕ ಸ್ಪರ್ಧೆಯ ವಿಭಾಗದಲ್ಲಿ ‘ನಾಗ ಮಂಡಲ’ ನಾಟಕ ಪ್ರಥಮ ಸ್ಥಾನ ಪಡೆದಿದೆ.
ವಿನೂತನ ರಂಗ ಕಲ್ಪನೆಯೊಂದಿಗೆ ನಾಗಮಂಡಲ ನಾಟಕವನ್ನು ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ಸದಸ್ಯರು ಮನೋಜ್ಞವಾಗಿ ಅಭಿನಯಿಸಿದ್ದರು. ಹಣ, ಮದ್ಯ, ಮಾದಕತೆ ಅಧಿಕಾರಗಳ ಹಿಂದೆ ಓಡುವ ಯುವ ಸಮಾಜ, ಶಿಥಿಲಗೊಳ್ಳುತ್ತಿರುವ ಕೌಟುಂಬಿಕ ಜೀವನದ ಕೈ ಕನ್ನಡಿಯಾಗಿ ನಾಗಮಂಡಲ ನಾಟಕವನ್ನು ಕಾಸರಗೋಡಿನ ಯುವ ರಂಗ ನಿರ್ದೇಶಕ ಸದಾಶಿವ ಬಾಲಮಿತ್ರ ಅವರು ವಿಭಿನ್ನವಾಗಿ ನಿರ್ದೇಶಿಸಿದ್ದು, ಹರೀಶ್ ಕುಮಾರ್ ತಲಪಾಡಿ ಅವರ ನೇತೃತ್ವದ ಅಭಿನಯ ತಂಡದಲ್ಲಿ ವಸಂತ ರೈ ಬಿ.ಕೆ., ಪ್ರತಿಮಾ ಹೆಬ್ಬಾರ್, ಜಯಲಕ್ಷ್ಮಿ ಜಿ.ಕುಂಪಲ ಕಲ್ಲರಕೋಡಿ, ಯಶೋದಾ ಪಿ., ಮಹಾಲಕ್ಷ್ಮಿ, ಇಂದಿರಾ ಜಿ. ಸುಜಾತ ಬೋಳಾರ, ರಾಮಕೃಷ್ಣ ಕಟ್ಟಿಮನಿ, ಯು.ಆರ್. ಶೆಟ್ಟಿ, ಮೊದಲಾದವರು ಮನೋಜ್ಞ ಅಭಿನಯ ನೀಡಿದ್ದರು. ಮೆಲ್ವಿನ್ ಪೆರ್ಮುದೆ ಸಂಗೀತ ಸಂಯೋಜನೆ ನೀಡಿದ್ದು, ಮೋಹನ್ ಸಿರಿರ್ಲಾಲ್, ಬಾಬು ಮಾಸ್ಟರ್, ಶಿವಪ್ರಸಾದ್ ಚೆರುಗೋಳಿ, ವಸಂತ ಮಾಸ್ಟರ್ ಮೂಡಂಬೈಲು, ದಿವಾಕರ ಬಲ್ಲಾಲ್, ಎಸ್.ಪಿ. ರಾವ್, ಅಶೋಕ್ ಕುಮಾರ್, ಬಾಲಕೃಷ್ಣ ಗಾಳಿಯಡ್ಕ ಮೊದಲಾದವರು ರಂಗಪರಿಕರಗಳಲ್ಲಿ ಸಹಕರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು