2:16 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ

13/08/2021, 10:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ನಾಗಬನ, ದೇಗುಲ, ಗುಡಿ-ಗೋಪುರಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಕೇವಲ ಸಂಪ್ರದಾಯಕ್ಕಾಗಿ ಆಚರಿಸಲಾಯಿತು.

ಮಸ್ಕಿ ತಾಲೂಕು ಸೇರಿದಂತೆ ರಾಯಚೂರು
ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನೆಲೆಸಿತ್ತು. ಇಲ್ಲಿನ ಜನರು ಶ್ರಾವಣ ಮಾಸದ ನಿಮಿತ್ತ ನಾಗರಾಜನ ಪೂಜಿಸುತ್ತಾರೆ. ಒಂದು ವೇಳೆ ಪಂಚಮಿ ದಿನದಲ್ಲಿ ಹಾವುಗಳು ಕಂಡರೆ ಅವುಗಳಿಗೆ ಹಾಲು ಎರೆದು ಬರಮಾಡಿಕೊಳ್ಳುತ್ತಾರೆ.
ಶ್ರಾವಣ ಮಾಸದ ನಾಗರ ಪಂಚಮಿಯನ್ನು ಜನರು
ವಿಶೇಷವಾಗಿ ಅದ್ದೂರಿಯಿಂದ ಆಚರಿಸುತ್ತಾರೆ. ನಾಗಪ್ಪನಿಗೆ ವಿಶೇಷವಾಗಿ ಪೂಜೆ, ಅಲಂಕಾರ, ವಿವಿಧ ರೀತಿಯ ಅಭಿಷೇಕ ನಡೆಯುತ್ತದೆ. ಅಲ್ಲದೆ ನಾಗರ ಪಂಚಮಿ ಇಡಿ ನಾಡಿನಲ್ಲಿ ದೊಡ್ಡಬ್ಬವಾಗಿದೆ. ಹೆಣ್ಣು ಮಕ್ಕಳನ್ನು ಗಂಡನ ಮನೆಯಿಂದ ತವರಮನೆಗೆ ಕರೆದುಕೊಂಡು ಬಂದು ಅವರಿಗೆ ಸಿರಿ ಬಂಗಾರ ಉಡುಗರೇ ಕೊಡುವ ಪದ್ಧತಿ ಇದೆ. 
ಹೆಣ್ಣು ಮಕ್ಕಳು ಜೋಕಾಲಿ ಹಾಡುವುದು ಗೆಳತಿಯರೆಲ್ಲ ಸೇರಿ ಹಬ್ಬ ಮಾಡುವುದು ವಿಶೇಷವಾಗಿ ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕದ ಭಾಗದಲ್ಲಿ ನಾವು ಕಾಣುತ್ತೇವೆ.

ಇತ್ತೀಚಿನ ಸುದ್ದಿ

ಜಾಹೀರಾತು