4:03 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು

21/08/2024, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಶಾಸಕ ಹರ್ಷವರ್ಧನ್ ಆರೋಪಿಸಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ನೀಡಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶಾಸಕರಿಗೆ ರೈತರ ಬಗ್ಗೆ ಕಾಳಜಿಯೂ ಇದೆ ನುಗುಏತ ನೀರಾವರಿಗೆ ಸದ್ಯದಲ್ಲಿಯೇ ಚಾಲನೆಯನ್ನು ನೀಡುತ್ತಾರೆ ಎಂದು ಮಾಜಿ ಶಾಸಕರ ಮಾತಿಗೆ ಕಳಲೆ ತಿರುಗೇಟು ನೀಡಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು ನುಗು ಜಲಾಶಯವು ಭರ್ತಿಯಾಗಿರುವ ಹಿನ್ನೆಲೆ ನುಗು ನಾಲೆಗೆ ಬೇಕಾಗುವಷ್ಟು ನೀರನ್ನು ಜಲಾಶಯದಿಂದಲೇ ಬಿಡಲಾಗುತ್ತಿದೆ
ಒಂದು ವೇಳೆ ಮಳೆಯ ಅಭಾವದಿಂದ ಜಲಾಶಯದಲ್ಲಿ ನೀರಿನ ಕೊರತೆಯಾದಾಗ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಆದರೆ ಈಗ ಆ ಕೊರತೆ ಇಲ್ಲ. ಅಲ್ಲದೆ ಈ ಯೋಜನೆಯ ಇನ್ನೂ ಅಲ್ಪಸ್ವಲ್ಪ ಕಾಮಗಾರಿ ಬಾಕಿಯಿದ್ದು ಅದು ಮುಗಿದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಜೊತೆ ಮಾತನಾಡಿ ಇದರ ಜೊತೆಗೆ ಇನ್ನೂ ನಂಜನಗೂಡು ತಾಲೂಕಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಈ ಯೋಜನೆಯನ್ನು ಲೋಕಾರ್ಪೃಣೆಗೊಳಿಸಲಾಗುವುದು ಎಂದು ಪತ್ರಿಕಾಗೋಷ್ಠಿಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷ ಕೆ ಮಾರುತಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡ ನಾಗೇಶ್ ರಾಜ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು