6:02 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು

21/08/2024, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಶಾಸಕ ಹರ್ಷವರ್ಧನ್ ಆರೋಪಿಸಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ನೀಡಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶಾಸಕರಿಗೆ ರೈತರ ಬಗ್ಗೆ ಕಾಳಜಿಯೂ ಇದೆ ನುಗುಏತ ನೀರಾವರಿಗೆ ಸದ್ಯದಲ್ಲಿಯೇ ಚಾಲನೆಯನ್ನು ನೀಡುತ್ತಾರೆ ಎಂದು ಮಾಜಿ ಶಾಸಕರ ಮಾತಿಗೆ ಕಳಲೆ ತಿರುಗೇಟು ನೀಡಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು ನುಗು ಜಲಾಶಯವು ಭರ್ತಿಯಾಗಿರುವ ಹಿನ್ನೆಲೆ ನುಗು ನಾಲೆಗೆ ಬೇಕಾಗುವಷ್ಟು ನೀರನ್ನು ಜಲಾಶಯದಿಂದಲೇ ಬಿಡಲಾಗುತ್ತಿದೆ
ಒಂದು ವೇಳೆ ಮಳೆಯ ಅಭಾವದಿಂದ ಜಲಾಶಯದಲ್ಲಿ ನೀರಿನ ಕೊರತೆಯಾದಾಗ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಆದರೆ ಈಗ ಆ ಕೊರತೆ ಇಲ್ಲ. ಅಲ್ಲದೆ ಈ ಯೋಜನೆಯ ಇನ್ನೂ ಅಲ್ಪಸ್ವಲ್ಪ ಕಾಮಗಾರಿ ಬಾಕಿಯಿದ್ದು ಅದು ಮುಗಿದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಜೊತೆ ಮಾತನಾಡಿ ಇದರ ಜೊತೆಗೆ ಇನ್ನೂ ನಂಜನಗೂಡು ತಾಲೂಕಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಈ ಯೋಜನೆಯನ್ನು ಲೋಕಾರ್ಪೃಣೆಗೊಳಿಸಲಾಗುವುದು ಎಂದು ಪತ್ರಿಕಾಗೋಷ್ಠಿಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷ ಕೆ ಮಾರುತಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡ ನಾಗೇಶ್ ರಾಜ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು