5:49 PM Thursday14 - August 2025
ಬ್ರೇಕಿಂಗ್ ನ್ಯೂಸ್
ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast…

ಇತ್ತೀಚಿನ ಸುದ್ದಿ

ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು

21/08/2024, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಶಾಸಕ ಹರ್ಷವರ್ಧನ್ ಆರೋಪಿಸಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ನೀಡಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶಾಸಕರಿಗೆ ರೈತರ ಬಗ್ಗೆ ಕಾಳಜಿಯೂ ಇದೆ ನುಗುಏತ ನೀರಾವರಿಗೆ ಸದ್ಯದಲ್ಲಿಯೇ ಚಾಲನೆಯನ್ನು ನೀಡುತ್ತಾರೆ ಎಂದು ಮಾಜಿ ಶಾಸಕರ ಮಾತಿಗೆ ಕಳಲೆ ತಿರುಗೇಟು ನೀಡಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು ನುಗು ಜಲಾಶಯವು ಭರ್ತಿಯಾಗಿರುವ ಹಿನ್ನೆಲೆ ನುಗು ನಾಲೆಗೆ ಬೇಕಾಗುವಷ್ಟು ನೀರನ್ನು ಜಲಾಶಯದಿಂದಲೇ ಬಿಡಲಾಗುತ್ತಿದೆ
ಒಂದು ವೇಳೆ ಮಳೆಯ ಅಭಾವದಿಂದ ಜಲಾಶಯದಲ್ಲಿ ನೀರಿನ ಕೊರತೆಯಾದಾಗ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಆದರೆ ಈಗ ಆ ಕೊರತೆ ಇಲ್ಲ. ಅಲ್ಲದೆ ಈ ಯೋಜನೆಯ ಇನ್ನೂ ಅಲ್ಪಸ್ವಲ್ಪ ಕಾಮಗಾರಿ ಬಾಕಿಯಿದ್ದು ಅದು ಮುಗಿದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಜೊತೆ ಮಾತನಾಡಿ ಇದರ ಜೊತೆಗೆ ಇನ್ನೂ ನಂಜನಗೂಡು ತಾಲೂಕಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಈ ಯೋಜನೆಯನ್ನು ಲೋಕಾರ್ಪೃಣೆಗೊಳಿಸಲಾಗುವುದು ಎಂದು ಪತ್ರಿಕಾಗೋಷ್ಠಿಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷ ಕೆ ಮಾರುತಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡ ನಾಗೇಶ್ ರಾಜ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು