7:35 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು

21/08/2024, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಶಾಸಕ ಹರ್ಷವರ್ಧನ್ ಆರೋಪಿಸಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ನೀಡಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶಾಸಕರಿಗೆ ರೈತರ ಬಗ್ಗೆ ಕಾಳಜಿಯೂ ಇದೆ ನುಗುಏತ ನೀರಾವರಿಗೆ ಸದ್ಯದಲ್ಲಿಯೇ ಚಾಲನೆಯನ್ನು ನೀಡುತ್ತಾರೆ ಎಂದು ಮಾಜಿ ಶಾಸಕರ ಮಾತಿಗೆ ಕಳಲೆ ತಿರುಗೇಟು ನೀಡಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು ನುಗು ಜಲಾಶಯವು ಭರ್ತಿಯಾಗಿರುವ ಹಿನ್ನೆಲೆ ನುಗು ನಾಲೆಗೆ ಬೇಕಾಗುವಷ್ಟು ನೀರನ್ನು ಜಲಾಶಯದಿಂದಲೇ ಬಿಡಲಾಗುತ್ತಿದೆ
ಒಂದು ವೇಳೆ ಮಳೆಯ ಅಭಾವದಿಂದ ಜಲಾಶಯದಲ್ಲಿ ನೀರಿನ ಕೊರತೆಯಾದಾಗ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಆದರೆ ಈಗ ಆ ಕೊರತೆ ಇಲ್ಲ. ಅಲ್ಲದೆ ಈ ಯೋಜನೆಯ ಇನ್ನೂ ಅಲ್ಪಸ್ವಲ್ಪ ಕಾಮಗಾರಿ ಬಾಕಿಯಿದ್ದು ಅದು ಮುಗಿದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಜೊತೆ ಮಾತನಾಡಿ ಇದರ ಜೊತೆಗೆ ಇನ್ನೂ ನಂಜನಗೂಡು ತಾಲೂಕಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಈ ಯೋಜನೆಯನ್ನು ಲೋಕಾರ್ಪೃಣೆಗೊಳಿಸಲಾಗುವುದು ಎಂದು ಪತ್ರಿಕಾಗೋಷ್ಠಿಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷ ಕೆ ಮಾರುತಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡ ನಾಗೇಶ್ ರಾಜ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು