6:47 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ; ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ: ವಿಕಾಸ್ ಪುತ್ತೂರು

26/10/2023, 14:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಮುಂದಿನ ವರ್ಷ ಜೂನ್ ನಲ್ಲಿ ನಡೆಯಲಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಪ್ರಥಮ ಗುರಿಯಾಗಿದೆ ಎಂದು ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷ ವಿಕಾಸ್ ಪುತ್ತೂರು ಹೇಳಿದರು. ಅವರು ಕೊಟ್ಟಿಗೆಹಾರದಲ್ಲಿ ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಎರಡೂ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಜಯಭೇರಿ ಬಾರಿಸಲಿದ್ದು ಕಾಂಗ್ರೇಸ್ ಗೆ ಸರಿಯಾದ ಪಾಠ ಕಲಿಸಲಿದೆ. ಪ್ರತಿ ಹೋಬಳಿ ಮಟ್ಟದಲ್ಲಿ ಬೂತ್ ಸಂಘಟನೆ ಮಾಡಿ ಪಕ್ಷ ಗೆಲುವು ಸಾಧಿಸಲು ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಕಾರಣ ಕರ್ತರಾಗಬೇಕು. ಈಗಾಲೇ ಮತದಾರರ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕಾಂಗ್ರೆಸ್ಸಿನ ನಾಡ ವಿರೋಧಿ ಧೋರಣೆಗಳಿಗೆ ನಮ್ಮ ಕ್ಷೇತ್ರದ ಪ್ರತಿನಿಧಿಗಳು ಹೆಚ್ಚೆಚ್ಚು ವಿಜೇತರಾಗುವ ಅನಿವಾರ್ಯತೆ ಇದೆ. ಇದರಿಂದ ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಸಹಕರಿಸಬೇಕು. ಹಾಗೂ ಪಕ್ಷವನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಪಣ ತೊಡಬೇಕು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಸಂಜಯ್ ಗೌಡ, ಎ. ಆರ್. ಅಭಿಲಾಷ್, ಆದರ್ಶ್ ತರುವೆ, ಹರೀಶ್, ಎ.ಎಸ್.ಅಶ್ವತ್ಥ್, ಸಾಗರ್, ಪರೀಕ್ಷಿತ್ ಜಾವಳಿ, ವಿಕ್ರಂ ಗೌಡ, ಪ್ರವೀಣ್, ದೇವೇಂದ್ರ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು