3:21 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ನಂಜನಗೂಡು ಹುಲ್ಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಸೋಲು

13/12/2024, 19:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ ಹಾಗೂ ಉಪಾಧ್ಯಕ್ಷ ಲೋಕೇಶ್ ವಿರುದ್ಧ ಮಾಡಲಾಗಿದ್ದ ಅವಿಶ್ವಾಸ ನಿರ್ಣಯ ಗೊತ್ತುವಳಿಗೆ ಸೋಲುಂಟಾಗಿದೆ.


ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯದ ಸಭೆ
ಇಂದು ನಡೆದ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಯಾವೊಬ್ಬ ಸದಸ್ಯರೂ ಹಾಜರಾಗದ ಕಾರಣ ಅವಿಶ್ವಾಸಕ್ಕೆ ಸೋಲಾಗಿದೆ
ಒಟ್ಟು 22 ಮಂದಿ ಸದಸ್ಯಬಲ ಹೊಂದಿರುವ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸರಿಯಾಗಿ ಆಡಳಿತ ನಡೆಸದೆ ಹಾಗೂ ಸದಸ್ಯರುಗಳನ್ನು ವಿಶ್ವಾಸಕ್ಕೆ ಪಡೆಯದೆ ಇದ್ದು ಅವರ ಆಡಳಿತ ವೈಫಲ್ಯದಿಂದಾಗಿ 19 ಮಂದಿ ಸದಸ್ಯರು ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಸಹಿ ಮಾಡಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನಲೆ ಇಂದು ನಡೆದ ಸಭೆಯಲ್ಲಿ ಯಾವೊಬ್ಬ ಸದಸ್ಯರು ಹಾಜರಾಗದ ಕಾರಣ ಅವಿಶ್ವಾಸಕ್ಕೆ ಸೋಲುಂಟಾಗಿ ಹಾಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರೇ ಮುಂದುವರೆಯುವಂತಾಗಿದೆ.
ಬದಲಾದ ಪರಿಸ್ಥಿತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಹಿ ಮಾಡಿದ್ದ ಕೆಲವು ಸದಸ್ಯರೆ ಅವರ ಪರ ಬ್ಯಾಟಿಂಗ್ ಮಾಡಿದ ಕಾರಣ ಇಂದಿನ ಸಭೆ ವಿಫಲವಾಗಿದೆ. ಉಪ ವಿಭಾಗಾಧಿಕಾರಿ ರಕ್ಷಿತ್ ಮಾತನಾಡಿ ಅವಿಶ್ವಾಸ ನಿರ್ಣಯದ ಸೋಲಿನ ಬಗ್ಗೆ ತಿಳಿಸಿದರು.
ಈ ಸಂದರ್ಭ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕಾರ್ಯದರ್ಶಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು