2:15 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ

06/05/2022, 23:33

ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇವ್ ನಾಯಕ್( 36) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಸೆನ್  ಕ್ರೈಂ ಪೊಲೀಸ್ ಠಾಣಾ ಮೊ.ನಂ.45/2022 ಕಲಂ: 406, 409, 417, 420, 465, 468, 471, 120(ಬಿ) ಜೊತೆಗೆ 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿರ್ಯಾದಿದಾರರ ಸಹಿಯನ್ನು ನಕಲಿಯಾಗಿ ಬಳಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ನಕಲಿ ದಾಖಲೆಪತ್ರಗಳಲ್ಲದೆ ಸಹಿಯನ್ನೂ ನಕಲುಗೊಳಿಸಿ ವೃದ್ಧರೊಬ್ಬರಿಗೆ ಸೇರಿದ ಜಮೀನನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಮಂಗಳೂರು ನಗರ ಸೆನ್ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಬೆಂಗಳೂರಿನ ನಿವಾಸಿಯಾದ ಪ್ರಸ್ತುತ ಬಜ್ಪೆ ಸಮೀಪದ ಕೊಂಪದವಿನಲ್ಲಿ ವಾಸವಾಗಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೊನ್ಸಾಲ್ವಿಸ್ (84) ಎಂಬವರಿಗೆ ಸೇರಿದ ಜಮೀನನ್ನು ಖರೀದಿಸುವ ನೆಪದಲ್ಲಿ ಕಬಳಿಸಿದ ಆರೋಪದ ಮೇರೆಗೆ ಉಡುಪಿಯ ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್‌ರನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಮ ಪೂಜಾರಿಯ ಬಂಧನ ಇನ್ನಷ್ಟೆ ಆಗಬೇಕಿದೆ. ಮೂವರ ವಿರುದ್ಧ ನಕಲಿ ದಾಖಲೆ ಮತ್ತು ನಕಲಿ ಸಹಿ ಮಾಡಿ ವಂಚಿಸಿದ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು