10:02 PM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ

06/05/2022, 23:33

ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇವ್ ನಾಯಕ್( 36) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಸೆನ್  ಕ್ರೈಂ ಪೊಲೀಸ್ ಠಾಣಾ ಮೊ.ನಂ.45/2022 ಕಲಂ: 406, 409, 417, 420, 465, 468, 471, 120(ಬಿ) ಜೊತೆಗೆ 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿರ್ಯಾದಿದಾರರ ಸಹಿಯನ್ನು ನಕಲಿಯಾಗಿ ಬಳಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ನಕಲಿ ದಾಖಲೆಪತ್ರಗಳಲ್ಲದೆ ಸಹಿಯನ್ನೂ ನಕಲುಗೊಳಿಸಿ ವೃದ್ಧರೊಬ್ಬರಿಗೆ ಸೇರಿದ ಜಮೀನನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಮಂಗಳೂರು ನಗರ ಸೆನ್ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಬೆಂಗಳೂರಿನ ನಿವಾಸಿಯಾದ ಪ್ರಸ್ತುತ ಬಜ್ಪೆ ಸಮೀಪದ ಕೊಂಪದವಿನಲ್ಲಿ ವಾಸವಾಗಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೊನ್ಸಾಲ್ವಿಸ್ (84) ಎಂಬವರಿಗೆ ಸೇರಿದ ಜಮೀನನ್ನು ಖರೀದಿಸುವ ನೆಪದಲ್ಲಿ ಕಬಳಿಸಿದ ಆರೋಪದ ಮೇರೆಗೆ ಉಡುಪಿಯ ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್‌ರನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಮ ಪೂಜಾರಿಯ ಬಂಧನ ಇನ್ನಷ್ಟೆ ಆಗಬೇಕಿದೆ. ಮೂವರ ವಿರುದ್ಧ ನಕಲಿ ದಾಖಲೆ ಮತ್ತು ನಕಲಿ ಸಹಿ ಮಾಡಿ ವಂಚಿಸಿದ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು