9:47 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ

06/05/2022, 23:33

ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇವ್ ನಾಯಕ್( 36) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಸೆನ್  ಕ್ರೈಂ ಪೊಲೀಸ್ ಠಾಣಾ ಮೊ.ನಂ.45/2022 ಕಲಂ: 406, 409, 417, 420, 465, 468, 471, 120(ಬಿ) ಜೊತೆಗೆ 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿರ್ಯಾದಿದಾರರ ಸಹಿಯನ್ನು ನಕಲಿಯಾಗಿ ಬಳಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ನಕಲಿ ದಾಖಲೆಪತ್ರಗಳಲ್ಲದೆ ಸಹಿಯನ್ನೂ ನಕಲುಗೊಳಿಸಿ ವೃದ್ಧರೊಬ್ಬರಿಗೆ ಸೇರಿದ ಜಮೀನನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಮಂಗಳೂರು ನಗರ ಸೆನ್ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಬೆಂಗಳೂರಿನ ನಿವಾಸಿಯಾದ ಪ್ರಸ್ತುತ ಬಜ್ಪೆ ಸಮೀಪದ ಕೊಂಪದವಿನಲ್ಲಿ ವಾಸವಾಗಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೊನ್ಸಾಲ್ವಿಸ್ (84) ಎಂಬವರಿಗೆ ಸೇರಿದ ಜಮೀನನ್ನು ಖರೀದಿಸುವ ನೆಪದಲ್ಲಿ ಕಬಳಿಸಿದ ಆರೋಪದ ಮೇರೆಗೆ ಉಡುಪಿಯ ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್‌ರನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಮ ಪೂಜಾರಿಯ ಬಂಧನ ಇನ್ನಷ್ಟೆ ಆಗಬೇಕಿದೆ. ಮೂವರ ವಿರುದ್ಧ ನಕಲಿ ದಾಖಲೆ ಮತ್ತು ನಕಲಿ ಸಹಿ ಮಾಡಿ ವಂಚಿಸಿದ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು