5:51 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ

06/05/2022, 23:33

ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇವ್ ನಾಯಕ್( 36) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಸೆನ್  ಕ್ರೈಂ ಪೊಲೀಸ್ ಠಾಣಾ ಮೊ.ನಂ.45/2022 ಕಲಂ: 406, 409, 417, 420, 465, 468, 471, 120(ಬಿ) ಜೊತೆಗೆ 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿರ್ಯಾದಿದಾರರ ಸಹಿಯನ್ನು ನಕಲಿಯಾಗಿ ಬಳಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ನಕಲಿ ದಾಖಲೆಪತ್ರಗಳಲ್ಲದೆ ಸಹಿಯನ್ನೂ ನಕಲುಗೊಳಿಸಿ ವೃದ್ಧರೊಬ್ಬರಿಗೆ ಸೇರಿದ ಜಮೀನನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಮಂಗಳೂರು ನಗರ ಸೆನ್ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಬೆಂಗಳೂರಿನ ನಿವಾಸಿಯಾದ ಪ್ರಸ್ತುತ ಬಜ್ಪೆ ಸಮೀಪದ ಕೊಂಪದವಿನಲ್ಲಿ ವಾಸವಾಗಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೊನ್ಸಾಲ್ವಿಸ್ (84) ಎಂಬವರಿಗೆ ಸೇರಿದ ಜಮೀನನ್ನು ಖರೀದಿಸುವ ನೆಪದಲ್ಲಿ ಕಬಳಿಸಿದ ಆರೋಪದ ಮೇರೆಗೆ ಉಡುಪಿಯ ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್‌ರನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಮ ಪೂಜಾರಿಯ ಬಂಧನ ಇನ್ನಷ್ಟೆ ಆಗಬೇಕಿದೆ. ಮೂವರ ವಿರುದ್ಧ ನಕಲಿ ದಾಖಲೆ ಮತ್ತು ನಕಲಿ ಸಹಿ ಮಾಡಿ ವಂಚಿಸಿದ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು