9:54 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು