7:42 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು