2:31 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು