9:31 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ನಕ್ಸಲ್ ಶರಣಾಗತಿ ರೋಚಕ ಸ್ಟೋರಿ ಬಯಲು: ದನ ಕಾಯುವ ಅಜ್ಜಿಯೇ ಸಂಧಾನಗಾರ್ತಿ; ಹಾಗಾದರೆ ಯಾರು ಈ ವೃದ್ದ?

13/01/2025, 14:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಕ್ಸಲ್ ಶರಣಾಗತಿ ಹಿಂದಿನ ರೋಚಕ ರಿಯಲ್ ಸ್ಟೋರಿ ಬಯಲಾಗಿದೆ. 6 ಜನ ನಕ್ಸಲರು ಶರಣಾಗತಿಯಲ್ಲಿ ದನಗಾಯಿ ಅಜ್ಜಿಯೇ ರೂವಾರಿ.
ಶೃಂಗೇರಿ ತಾಲೂಕಿನ ಕಿಗ್ಗಾದ ಕಿತ್ತಲೆಮನೆ ನಿವಾಸಿ
ಗೌರಮ್ಮ ಎಂಬ ವೃದ್ದ ಅಜ್ಜಿಯ ಮಧ್ಯಸ್ಥಿಕೆಯಿಂದ 6 ಜನ ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಇತ್ತೀಚೆಗೆ ಶರಣಾಗಿದ್ದಾರೆ.
ಅಜ್ಜಿ ಗೌರಮ್ಮ ಸರ್ಕಾರ ಮತ್ತು ನಕ್ಸಲರ ನಡುವೆ ಸಂಧಾನ ಕೊಂಡಿಯಾಗಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಂಧಾನ ಪ್ರಕ್ರಿಯೆಗೆ ಸುಮಾರು 72 ದಿನಗಳ ಸುದೀರ್ಘ ಪಯಣ ನಡೆಸಲಾಗಿದೆ. ವಿಕ್ರಂ ಗೌಡ ಎನ್ ಕೌಂಟರ್ ಗೂ ಮುನ್ನವೇ ಶರಣಾಗತಿ ಸಂಧಾನಕ್ಕೆ ಯತ್ನ ನಡೆದಿತ್ತು. ನಕ್ಸಲರ ಸಂಧಾನ ಪತ್ರವನ್ನು ಸರಕಾರಕ್ಕೆ ತಲುಪಿಸುವಲ್ಲಿ ಗೌರಮ್ಮ
ಮಹತ್ವದ ಪಾತ್ರವಹಿಸಿದ್ದಾರೆ.
20ರಿಂದ 30 ಕಿಲೋಮೀಟರ್ ನಡೆದುಕೊಂಡೇ ಸಂಪರ್ಕ ಸೇತುವೆಯಾಗಿ ಗೌರಮ್ಮ ಕೆಲಸ ಮಾಡಿದ್ದಾರೆ. ನಕ್ಸಲರು ಮತ್ತು ಸಂಧಾನಕಾರರ ನಡುವೆ ಸಂಪರ್ಕ ಸೇತುವೆಯಾಗಿ ಗೌರಮ್ಮ ಕೆಲಸ ಮಾಡಿದ್ದರು.
ನಕ್ಸಲರ ಪತ್ರ, ಸಂಧಾನ ಸಮಿತಿಯ ಪತ್ರವನ್ನು ಪರಸ್ಪರ ವಿನಿಮಯ ಮಾಡುವಲ್ಲಿ ಗೌರಮ್ಮ ದೊಡ್ಡ ಪಾತ್ರ ನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು