6:07 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು: ಸಚಿವ ವಿ. ಸುನಿಲ್ ಕುಮಾರ್ 

14/01/2022, 18:20

ಕಾರ್ಕಳ(reporterkarnataka.com):  ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ನಿಟ್ಟೆ ಕಾಲೇಜು ಸಭಾಂಗಣದಲ್ಲಿ ನಡೆದ ಭಾರತ ಸರ್ಕಾರದ ಎಸ್ ಎಫ್ ಯು ಆರ್ ಟಿ ಐ ಸ್ಟೀಮ್ ನಿಂದ ಪ್ರಾಯೋಜಿತ ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಶಂಕುಸ್ಥಾಪನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು, ಪ್ರಧಾನಿ ಮೋದಿಯವರ ಆತ್ಮನಿರ್ಭರ ಭಾರತದ ಕಲ್ಪನೆಯಡಿಯಲ್ಲಿ ದೇಶಾದ್ಯಂತ ಹತ್ತಾರು ಪ್ರಯೋಗಗಳು ನಡೆಯುತ್ತಿವೆ. ಒಂದು ತಾಲೂಕು ಒಂದು ಉತ್ಪನ್ನ  ಯೋಜನೆಯನ್ನು  ಕಾರ‍್ಯರೂಪಕ್ಕೆ ತರಲಾಗುತ್ತಿದ್ದು ,ಗ್ರಾಮೀಣ ಉತ್ಪನ್ನಗಳಿಗೆ ಮಹತ್ವ ನೀಡಲಾಗುತ್ತಿದೆ. ಎಂದರು.

ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಘಟಕದ   ಶಂಕುಸ್ಥಾಪನೆ ನೆರವೇರಿಸಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ವಿನಯ್ ಹೆಗ್ಡೆ ಮಾತನಾಡಿ, ನಿಟ್ಟೆಯಲ್ಲಿ ಅಭಿವೃದ್ದಿಯ ಕ್ರಾಂತಿಯಾಗಿ, ಸ್ಥಳೀಯರಿಗೆ ಉದ್ಯೋಗವಾಕಾಶ ನೀಡುವ ಮೂಲಕ ಅಭಿವೃದ್ದಿ ಪಥದತ್ತ ಸಾಗಲಿ ಎಂದು ಶುಭ ಹಾರೈಸಿದರು.

ಎಐಸಿ ನಿಟ್ಟೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎ. ಪಿ. ಆಚಾರ್ ಕಂಪೆನಿಯ ಮಹತ್ವವನ್ನು ವಿವರಿಸಿದರು.

ಸಭೆಯಲ್ಲಿ ನಿಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ  ಸತೀಶ್ ಎನ್ ಸಾಲಿಯಾನ್, ಸುಫಲ ಫಾರ್ಮರ್ ಪ್ರೋಡ್ಯೂಸರ್ ಕಂಪನಿ ಅಧ್ಯಕ್ಷ ನಾರಾಯಣ ಟಿ ಪೂಜಾರಿ, ಸುಫಲ ಫಾರ್ಮಸ್  ಪ್ರೊಡ್ಯೂಸರ್ ಕಂಪನಿ(ನಿ) ಆಡಳಿತ ನಿರ್ದೇಶಕರಾದ ನವೀನ್ ನಾಯಕ್  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು