8:33 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು: ಸಚಿವ ವಿ. ಸುನಿಲ್ ಕುಮಾರ್ 

14/01/2022, 18:20

ಕಾರ್ಕಳ(reporterkarnataka.com):  ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ನಿಟ್ಟೆ ಕಾಲೇಜು ಸಭಾಂಗಣದಲ್ಲಿ ನಡೆದ ಭಾರತ ಸರ್ಕಾರದ ಎಸ್ ಎಫ್ ಯು ಆರ್ ಟಿ ಐ ಸ್ಟೀಮ್ ನಿಂದ ಪ್ರಾಯೋಜಿತ ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಶಂಕುಸ್ಥಾಪನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು, ಪ್ರಧಾನಿ ಮೋದಿಯವರ ಆತ್ಮನಿರ್ಭರ ಭಾರತದ ಕಲ್ಪನೆಯಡಿಯಲ್ಲಿ ದೇಶಾದ್ಯಂತ ಹತ್ತಾರು ಪ್ರಯೋಗಗಳು ನಡೆಯುತ್ತಿವೆ. ಒಂದು ತಾಲೂಕು ಒಂದು ಉತ್ಪನ್ನ  ಯೋಜನೆಯನ್ನು  ಕಾರ‍್ಯರೂಪಕ್ಕೆ ತರಲಾಗುತ್ತಿದ್ದು ,ಗ್ರಾಮೀಣ ಉತ್ಪನ್ನಗಳಿಗೆ ಮಹತ್ವ ನೀಡಲಾಗುತ್ತಿದೆ. ಎಂದರು.

ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಘಟಕದ   ಶಂಕುಸ್ಥಾಪನೆ ನೆರವೇರಿಸಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ವಿನಯ್ ಹೆಗ್ಡೆ ಮಾತನಾಡಿ, ನಿಟ್ಟೆಯಲ್ಲಿ ಅಭಿವೃದ್ದಿಯ ಕ್ರಾಂತಿಯಾಗಿ, ಸ್ಥಳೀಯರಿಗೆ ಉದ್ಯೋಗವಾಕಾಶ ನೀಡುವ ಮೂಲಕ ಅಭಿವೃದ್ದಿ ಪಥದತ್ತ ಸಾಗಲಿ ಎಂದು ಶುಭ ಹಾರೈಸಿದರು.

ಎಐಸಿ ನಿಟ್ಟೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎ. ಪಿ. ಆಚಾರ್ ಕಂಪೆನಿಯ ಮಹತ್ವವನ್ನು ವಿವರಿಸಿದರು.

ಸಭೆಯಲ್ಲಿ ನಿಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ  ಸತೀಶ್ ಎನ್ ಸಾಲಿಯಾನ್, ಸುಫಲ ಫಾರ್ಮರ್ ಪ್ರೋಡ್ಯೂಸರ್ ಕಂಪನಿ ಅಧ್ಯಕ್ಷ ನಾರಾಯಣ ಟಿ ಪೂಜಾರಿ, ಸುಫಲ ಫಾರ್ಮಸ್  ಪ್ರೊಡ್ಯೂಸರ್ ಕಂಪನಿ(ನಿ) ಆಡಳಿತ ನಿರ್ದೇಶಕರಾದ ನವೀನ್ ನಾಯಕ್  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು