2:33 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕವನ : ನಮ್ಮ ನಡೆ ಶಾಲೆ ಕಡೆ | ಉಮಾ ಮಾಧವಿ

23/10/2021, 16:49

ಅಂದು ,
ಸಂಚಾರಿ ವಾಣಿಯನ್ನು ಮುಟ್ಟಿ ನೋಡಲು 
ಬಿಡದ ಹಿರಿಯರು,
ಆದರೆ ಚಿಣ್ಣರಿಗೆ ಬಲು ಆಸೆ 
ಏನಿರಬಹುದು? ಅದರಲ್ಲಿ ತಿಳಿವಾಸೆ
ಚಿಣ್ಣರು ಜಾಣರು ಗುಟ್ಟೆಲ್ಲಾ ಬಲ್ಲರು 

ಇಂದು ,
 ಅದೇ ಹಿರಿಯರು ಬನ್ನಿ ವೀಡಿಯೋ ಪಾಠ
ನೋಡಿ ಎಂದರು
ಚಿಣ್ಣರಿಗೆ ವೀಡಿಯೋ ನೋಡಿ ನೋಡಿ ಕಣ್ಣಾಲಿಗಳು ಸೋತವು, ಜೇಡರ ಬಲೆಯಂತೆ
ಕಣ್ಣೆಲ್ಲ ಮಯ ಮಯ 

ಯಾರಿಗೆ ಬೇಕು ?ಈ ವಾಣಿ
ವರ್ಕ್ ಉಂಟು, ನೆಟ್ ಇಲ್ಲ, ವೈಫೈ ಹಾಕಿಲ್ಲ
ಆನ್ಲೈನ್ ಪಾಠದ ಗೋಳು ತಲೆಯೆಲ್ಲಾ ಹಾಳು  .

ಹೌದು 
ಅಂದು ಈ ಚಿಣ್ಣರು ಕಾಯುತ್ತಿದ್ದರು
ಶಾಲೆಗೆ ಯಾವಾಗ ರಜೆ.
ಇಂದು ಬಕಪಕ್ಷಿಯಂತೆ ಕಾಯುವರು
ಶಾಲೆ ಯಾವಾಗ ಎಂದು 
ಸುದ್ದಿ ಬಂತು
 ಶಾಲೆ ಆರಂಭವಾಗುವುದೆಂದು, ಕೇಳಿದ್ದೇ ತಡ ,ಚಿಣ್ಣರು
 ಸಂಚಾರಿವಾಣಿ ಯನ್ನು ಎತ್ತಿ ಹಾಕಿ 
ನಮಸ್ಕಾರ -ಎಂದಿಗೂ ನಿನ್ನ ಸಹವಾಸ ಬೇಡಪ್ಪ ಎನ್ನುತ್ತಾ 
ಖುಷಿ ಖುಷಿಯಿಂದ ಚಿಣ್ಣರೆಲ್ಲ ಒಟ್ಟುಗೂಡಿ
 ಹೆಗಲ ಮೇಲೆ ಚೀಲ ಹಾಕಿ ನಿಷ್ಕಲ್ಮಶ 
ನಗುವಿನೊಂದಿಗೆ ಹೊರಟಿದ್ದಾರೆ.

 ತರಗತಿಯಲ್ಲಿ ಪಾಠ ಕೇಳುವ ಆಸೆಯಿಂದ
 ಟೀಚರನ್ನು ನೋಡುವ ಉತ್ಸಾಹದಿಂದ
 ಗೆಳೆಯರೊಡನೆ ಆಡುವ ಆತುರದಿಂದ 
ನಗುತ್ತಾ ನಗುತ್ತಾ ಹೇಳುತ್ತಾರೆ ,ಅಯ್ಯೋ ದೇವರೇ ,ಎಂದೆಂದಿಗೂ 
ಈ ಮಾರಿ ಕೊರೋನಾ ಬಾರದಿರಲಿ .
ಸದಾಕಾಲ ನಮ್ಮ ನಡೆ ಶಾಲೆ ಕಡೆಗೆ ಇರಲಿ .   

– ಉಮಾ ಮಾಧವಿ
 ನಿವೃತ್ತ ಶಿಕ್ಷಕಿ, ಕೊಳಲಗಿರಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು