1:45 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಕವನ : ನಮ್ಮ ನಡೆ ಶಾಲೆ ಕಡೆ | ಉಮಾ ಮಾಧವಿ

23/10/2021, 16:49

ಅಂದು ,
ಸಂಚಾರಿ ವಾಣಿಯನ್ನು ಮುಟ್ಟಿ ನೋಡಲು 
ಬಿಡದ ಹಿರಿಯರು,
ಆದರೆ ಚಿಣ್ಣರಿಗೆ ಬಲು ಆಸೆ 
ಏನಿರಬಹುದು? ಅದರಲ್ಲಿ ತಿಳಿವಾಸೆ
ಚಿಣ್ಣರು ಜಾಣರು ಗುಟ್ಟೆಲ್ಲಾ ಬಲ್ಲರು 

ಇಂದು ,
 ಅದೇ ಹಿರಿಯರು ಬನ್ನಿ ವೀಡಿಯೋ ಪಾಠ
ನೋಡಿ ಎಂದರು
ಚಿಣ್ಣರಿಗೆ ವೀಡಿಯೋ ನೋಡಿ ನೋಡಿ ಕಣ್ಣಾಲಿಗಳು ಸೋತವು, ಜೇಡರ ಬಲೆಯಂತೆ
ಕಣ್ಣೆಲ್ಲ ಮಯ ಮಯ 

ಯಾರಿಗೆ ಬೇಕು ?ಈ ವಾಣಿ
ವರ್ಕ್ ಉಂಟು, ನೆಟ್ ಇಲ್ಲ, ವೈಫೈ ಹಾಕಿಲ್ಲ
ಆನ್ಲೈನ್ ಪಾಠದ ಗೋಳು ತಲೆಯೆಲ್ಲಾ ಹಾಳು  .

ಹೌದು 
ಅಂದು ಈ ಚಿಣ್ಣರು ಕಾಯುತ್ತಿದ್ದರು
ಶಾಲೆಗೆ ಯಾವಾಗ ರಜೆ.
ಇಂದು ಬಕಪಕ್ಷಿಯಂತೆ ಕಾಯುವರು
ಶಾಲೆ ಯಾವಾಗ ಎಂದು 
ಸುದ್ದಿ ಬಂತು
 ಶಾಲೆ ಆರಂಭವಾಗುವುದೆಂದು, ಕೇಳಿದ್ದೇ ತಡ ,ಚಿಣ್ಣರು
 ಸಂಚಾರಿವಾಣಿ ಯನ್ನು ಎತ್ತಿ ಹಾಕಿ 
ನಮಸ್ಕಾರ -ಎಂದಿಗೂ ನಿನ್ನ ಸಹವಾಸ ಬೇಡಪ್ಪ ಎನ್ನುತ್ತಾ 
ಖುಷಿ ಖುಷಿಯಿಂದ ಚಿಣ್ಣರೆಲ್ಲ ಒಟ್ಟುಗೂಡಿ
 ಹೆಗಲ ಮೇಲೆ ಚೀಲ ಹಾಕಿ ನಿಷ್ಕಲ್ಮಶ 
ನಗುವಿನೊಂದಿಗೆ ಹೊರಟಿದ್ದಾರೆ.

 ತರಗತಿಯಲ್ಲಿ ಪಾಠ ಕೇಳುವ ಆಸೆಯಿಂದ
 ಟೀಚರನ್ನು ನೋಡುವ ಉತ್ಸಾಹದಿಂದ
 ಗೆಳೆಯರೊಡನೆ ಆಡುವ ಆತುರದಿಂದ 
ನಗುತ್ತಾ ನಗುತ್ತಾ ಹೇಳುತ್ತಾರೆ ,ಅಯ್ಯೋ ದೇವರೇ ,ಎಂದೆಂದಿಗೂ 
ಈ ಮಾರಿ ಕೊರೋನಾ ಬಾರದಿರಲಿ .
ಸದಾಕಾಲ ನಮ್ಮ ನಡೆ ಶಾಲೆ ಕಡೆಗೆ ಇರಲಿ .   

– ಉಮಾ ಮಾಧವಿ
 ನಿವೃತ್ತ ಶಿಕ್ಷಕಿ, ಕೊಳಲಗಿರಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು