8:57 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಮ್ಮಲ್ಲಿ ಅಭಿವೃದ್ಧಿಯ ಚಿಂತನೆ ಇರಲಿ, ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು: ಮಾಜಿ ಸಿಎಂ ಜಗದೀಶ್ ಶೆಟ್ಟರ್

26/08/2023, 23:06

ಉಡುಪಿ(reporterkarnataka.com): ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು.

ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು.
ಉಡುಪಿಯಲ್ಲಿ ಶನಿವಾರ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಯೋಜಿಸಿದ್ದ ಮಾಲಿನ್ಯ ನಿಯಂತ್ರಿತ ಕೈಗಾರೀಕರಣ ಹಾಗೂ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಬ್ಬಳ್ಳಿ ಅಂಕೋಲ ರೈಲು ಮಾರ್ಗ ಅಭಿವೃದ್ಧಿಯಾಗಬೇಕಾಗಿದೆ. ಬೇಲಿಕೇರಿ ಬಂದರು ಅಭಿವೃದ್ಧಿ ಬಗ್ಗೆ ಕೂಡ ಕ್ರಮ ಆಗಬೇಕಾಗಿದೆ ಎಂದು ಶೆಟ್ಟರ್ ನುಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ಅವರು ಮಾತನಾಡಿ ಮಾತನಾಡಿ, ಸರಕಾರ ವ್ಯಾಪಾರ , ವ್ಯವಹಾರ , ಉದ್ದಿಮೆ ನಡೆಸಬಾರದು. ಅವುಗಳಲ್ಲಿ ಖಾಸಗಿ ಅವರಿಗೆ ಮುಕ್ತ ಅವಕಾಶ ಕೊಡಬೇಕು. ಸರಕಾರದ್ದು ಪ್ರಜಾ ಕಲ್ಯಾಣ ಕೆಲಸದ ಉದ್ದೇಶ ಮಾತ್ರ ಇರಬೇಕು ಎಂದು ನುಡಿದರು.
ಅಭಿವೃದ್ಧಿಯ ಸಂದರ್ಭದಲ್ಲಿ ಯಾವುದೇ ಸಂಘಟನೆಯವರು ವಿರೋಧಕ್ಕಾಗಿ ವಿರೋಧ ಮಾಡಬಾರದು ಎಂದರು .
ಸಣ್ಣ ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಸರಕಾರ ಉತ್ತೇಜನ ನೀಡಬೇಕೆಂದು ಅವರು ಮನವಿ ಮಾಡಿದರು .

ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿ , ಅಭಿವೃದ್ಧಿ ಸಂದರ್ಭದಲ್ಲಿ ಪರಿಸರ ಕಾಳಜಿ ವಹಿಸಬೇಕು. ಯಾವುದೇ ಅಭಿವೃದ್ಧಿಯು ಜನರ ಬದುಕಿಗೆ ಹಾನಿ ತರಬಾರದು ಹಾಗೂ ಪರಿಸರಕ್ಕೂ ಹಾನಿ ಎಸಗಬಾರದು ಎಂದು ಹೇಳಿದರು.
ಈ ಭೂಮಿ ನಮಗೆ ಹಾಗೂ ನಮ್ಮ ಮಕ್ಕಳಿಗೆ ಮಾತ್ರವಲ್ಲ ಇನ್ನೂ ಮುಂದಿನ ಪೀಳಿಗೆಗೂ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಖಾದರ್ ನುಡಿದರು .
ಜಯಶ್ರೀಕೃಷ್ಣ ಪರಿಸರ ಸಮಿತಿಯವರು ಕರಾವಳಿ ಹಾಗೂ ರಾಜ್ಯದ ಅಭಿವೃದ್ಧಿ ಹಿನ್ನೆಲೆಯಲ್ಲಿ ನೀಡಿದ ನೀಲನಕ್ಷೆಯ ವರದಿಯನ್ನು ಸರಕಾರದ ಮಟ್ಟದಲ್ಲಿ ತಜ್ಞರ ಸಮಿತಿಯ ಮೂಲಕ ಚರ್ಚೆ ನಡೆಸಲಾಗುವುದು ಎಂದು ಖಾದರ್ ಭರವಸೆ ನೀಡಿದರು .
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾಜಿ ಸಚಿವ ನಾಗರಾಜ ಶೆಟ್ಟಿ , ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಕ್ಯಾ.ಗಣೇಶ್ ಕಾರ್ಣಿಕ್ ಮಾತನಾಡಿದರು . ಜಯಶ್ರೀಕೃಷ್ಣ ಪರಿಸರ ಸಮಿತಿಯ ಸ್ಥಾಪಕ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಅಧ್ಯಕ್ಷ ಎಲ್.ವಿ.ಅಮೀನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಡುಪಿ‌ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ , ಜಿಲ್ಲಾ ಬಿಜೆಪಿ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕೂರ್ ಸುರೇಂದ್ರ ಸಾಲ್ಯಾನ್ , ಉಪಾಧ್ಯಕ್ಷರಾದ ಜಗದೀಶ್ ಅಧಿಕಾರಿ, ರಾಮಚಂದ್ರ ಬೈಕಂಪಾಡಿ , ಕೋಶಾಧಿಕಾರಿ ತುಳಸಿದಾಸ್ ಅಮೀನ್ ಉಪಸ್ಥಿತರಿದ್ದರು.
ಸಮಿತಿಯ ಉಪಾಧ್ಯಕ್ಷ ನಿತ್ಯಾನಂದ ಕೋಟ್ಯಾನ್ ಸ್ವಾಗತಿಸಿದರು, ಮಾಧ್ಯಮ ವಕ್ತಾರ ದಯಾಸಾಗರ ಚೌಟ ಕಾರ್ಯಕ್ರಮ ನಿರ್ವಹಿಸಿದರು. ಸುರೇಂದ್ರ ಮೆಂಡನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು