12:49 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ನನಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ವಿವೇಚನೆ ಬಿಟ್ಟಿದ್ದು: ಶಾಸಕ ಮಹೇಶ್ ಕಮಟಳ್ಳಿ

02/08/2021, 17:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಬಿಜೆಪಿ 

ಹೈಕಮಾಂಡ್ ಗೆ ಸಂಬಂಧಿಸಿದ ವಿಷಯ ಆಗಿದೆ. ನನಗೆ ಸಚಿವ ನೀಡಬೇಕೆಂದು ಪಕ್ಷದಲ್ಲಿ ಬೇಡಿಕೆ ಇದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.


ನಮ್ಮಪಕ್ಷದ ವರಿಷ್ಠರು, ನಮ್ಮ ನಾಯಕರಾದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆಯೋ ಅದಕ್ಕೆ ತಾನು ಬದ್ಧನಿದ್ದೇನೆ. ನನ್ನನ್ನು ಸಚಿವ ಮಾಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಈಗಾಗಲೇ ಕೃಷ್ಣಾ ನದಿ ತೀರದ 22 ಹಳ್ಳಿಗಳು ಸಂಪೂರ್ಣ ಜಲಾವೃತವಾಗಿದೆ. ಅಲ್ಲಿನ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜತೆ ಮಾತನಾಡಿ ವ್ಯವಸ್ಥೆ ಮಾಡುವುದಾಗಿ ಅವರು ಭರವಸೆ ನೀಡಿದರು.

ಪ್ರವಾಹದ ಸಂದರ್ಭದಲ್ಲಿ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳ ಕುರಿತು ಅವಲೋಕಿಸಿದ್ದೇನೆ. ಶೀಘ್ರವಾಗಿ ಸರಕಾರದಿಂದ ಪರಿಹಾರ ಕೊಡಿಸುವುದಾಗಿ ಅವರು ಹೇಳಿದರು 


ಕೃಷ್ಣಾ ನದಿ ಪ್ರವಾಹದಲ್ಲಿ ಜಲಾವೃತವಾದ ಗ್ರಾಮಗಳಿಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಭೇಟಿ ನೀಡಿ ನಿರಾಶ್ರಿತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು