5:27 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಂಜನಗೂಡು: ರೈತರಿಗೆ ವೈಜ್ಞಾನಿಕ ಬರ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

21/05/2024, 18:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ರೈತ, ಕೃಷಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯದ ರೈತರಿಗೆ ಬರ ಪರಿಹಾರವನ್ನು ರಾಜ್ಯ ಸರ್ಕಾರ ಕೊಡಬೇಕು. ಕೇಂದ್ರ ಸರ್ಕಾರ ರೈತರಿಗೆ ಸಮರ್ಪಕವಾಗಿ ಹಣ ನೀಡಿಲ್ಲ. ಬರ ಮುಗಿದು ಮಳೆಗಾಲ ಪ್ರಾರಂಭವಾಗಿದೆ. ರೈತರು ಬಿತ್ತನೆ ಮಾಡಲು ಹಣದ ಮುಗ್ಗಟ್ಟಿನಿಂದ ಪರದಾಡುತ್ತಿದ್ದಾರೆ. ಬರ ಪರಿಹಾರ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ ಆದರೆ, ರಾಜ್ಯ ಸರ್ಕಾರ ಇನ್ನು ಬರ ಪರಿಹಾರ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.
ಕೆಲ ರೈತರಿಗೆ ಪುಡಿಗಾಸು ಪರಿಹಾರ ನೀಡಿ, ಕೈತೊಳೆದು ಕೊಂಡಿದ್ದಾರೆ. ಈ ಕೂಡಲೇ ವೈಜ್ಞಾನಿಕವಾಗಿ ಬರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತರು ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಲ ತೀರಿಸಲಾಗಿದೆ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ರೈತಪರ ಎಂದು ಹೇಳಿಕೊಳ್ಳುವ ಸರ್ಕಾರಗಳು ಬರ ಪರಿಹಾರ ನೀಡಲು ಮೀನಾಮೇಷ ಎಣಿಸುತ್ತಿದ್ದಾರೆ. ಆದಷ್ಟು ರೈತರ ಬ್ಯಾಂಕ್ ಖಾತೆಗಳಿಗೆ ಬರ ಪರಿಹಾರ ಹಣವನ್ನು ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಮೈಸೂರು ಜಿಲ್ಲಾ ಸಂಚಾಲಕರಾದ ಎಚ್.ಎಂ. ಬಸವರಾಜ್, ರೈತ ಮುಖಂಡರಾದ ಬೊಕ್ಕಳ್ಳಿ ನಂಜುಂಡಸ್ವಾಮಿ, ವಸಂತ ಸೇರಿದಂತೆ ರೈತರು ಮತ್ತು ಕೃಷಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು