9:32 AM Wednesday4 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ನಂಜನಗೂಡು: ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯ ಲೋಕಾರ್ಪಣೆ

21/05/2024, 18:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಲೋಕಾರ್ಪಣೆ ಮಾಡಿದರು.


ನೂತನ ದೇವಾಲಯದಲ್ಲಿ ಶ್ರೀ ನಾಡಮೇಲಮ್ಮ ಅಮ್ಮನವರ ಮೂರ್ತಿಯನ್ನು ಕುಳಿರಿಸಿ ಹೂವಿನಿಂದ ಅಲಂಕಾರ ಮಾಡಿ, ಗ್ರಾಮಸ್ಥರು ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಹೊಸ ನೀರು ತಂದು, ಸತ್ತಿಗೆ, ಸುರ ಪಾಣಿ, ಮಂಗಳವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ದೇವಾಲಯದ ಮುಂಭಾಗದಲ್ಲಿ ಹೋಮ-ಹವನ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಅನ್ನ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ನೂತನ ದೇವಾಲಯವನ್ನು ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು,
ಆದಿಶಕ್ತಿ ಶ್ರೀ ನಾಡಮೇಲಮ್ಮ ಅಮ್ಮನವರ ದೇವಾಲಯವನ್ನು ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ.
ಮುಂಜಾನೆಯಿಂದಲೆ ದೇವಾಲಯದಲ್ಲಿ ಹೋಮ ಹವನ ಮಾಡಿ, ಪೂಜಾ ಕೈಂಕರ್ಯಗಳು ನಡೆದಿವೆ. ದೇವಾಲಯದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಗ್ರಾಮದ ಮಹದೇಶ್ವರಸ್ವಾಮಿ ದೇವಾಲಯದಿಂದ ಮೆರವಣಿಗೆ ಮಾಡಲಾಗಿದೆ, ಈ ವರ್ಷ ಮಳೆಯಾದರೆ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ತುಂಬಾ ಅನುಕೂಲವಾಗಲಿದೆ. ಹಾಗಾಗಿ ಉತ್ತಮ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ನಾನು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಗೋವಿಂದರಾಜು, ಹಾಲು ಉತ್ಪಾದಕರ ಸಂಘದ ಪರೀಕ್ಷಕ ನಂಜನಾಯಕ, ಎಂ.ಜಿ. ಮಂಜುನಾಥ್, ದೇವರಗುಡ್ಡಪ್ಪ ಮಹೇಶ್, ಮುಖಂಡರಾದ ಮಂಚನಾಯಕ, ಮಹದೇವನಾಯಕ, ಯುವ ಮುಖಂಡರಾದ ಭದ್ರನಾಯಕ, ಮನು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು