3:47 PM Thursday3 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು: ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯ ಲೋಕಾರ್ಪಣೆ

21/05/2024, 18:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಲೋಕಾರ್ಪಣೆ ಮಾಡಿದರು.


ನೂತನ ದೇವಾಲಯದಲ್ಲಿ ಶ್ರೀ ನಾಡಮೇಲಮ್ಮ ಅಮ್ಮನವರ ಮೂರ್ತಿಯನ್ನು ಕುಳಿರಿಸಿ ಹೂವಿನಿಂದ ಅಲಂಕಾರ ಮಾಡಿ, ಗ್ರಾಮಸ್ಥರು ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಹೊಸ ನೀರು ತಂದು, ಸತ್ತಿಗೆ, ಸುರ ಪಾಣಿ, ಮಂಗಳವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ದೇವಾಲಯದ ಮುಂಭಾಗದಲ್ಲಿ ಹೋಮ-ಹವನ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಅನ್ನ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ನೂತನ ದೇವಾಲಯವನ್ನು ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು,
ಆದಿಶಕ್ತಿ ಶ್ರೀ ನಾಡಮೇಲಮ್ಮ ಅಮ್ಮನವರ ದೇವಾಲಯವನ್ನು ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ.
ಮುಂಜಾನೆಯಿಂದಲೆ ದೇವಾಲಯದಲ್ಲಿ ಹೋಮ ಹವನ ಮಾಡಿ, ಪೂಜಾ ಕೈಂಕರ್ಯಗಳು ನಡೆದಿವೆ. ದೇವಾಲಯದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಗ್ರಾಮದ ಮಹದೇಶ್ವರಸ್ವಾಮಿ ದೇವಾಲಯದಿಂದ ಮೆರವಣಿಗೆ ಮಾಡಲಾಗಿದೆ, ಈ ವರ್ಷ ಮಳೆಯಾದರೆ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ತುಂಬಾ ಅನುಕೂಲವಾಗಲಿದೆ. ಹಾಗಾಗಿ ಉತ್ತಮ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ನಾನು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಗೋವಿಂದರಾಜು, ಹಾಲು ಉತ್ಪಾದಕರ ಸಂಘದ ಪರೀಕ್ಷಕ ನಂಜನಾಯಕ, ಎಂ.ಜಿ. ಮಂಜುನಾಥ್, ದೇವರಗುಡ್ಡಪ್ಪ ಮಹೇಶ್, ಮುಖಂಡರಾದ ಮಂಚನಾಯಕ, ಮಹದೇವನಾಯಕ, ಯುವ ಮುಖಂಡರಾದ ಭದ್ರನಾಯಕ, ಮನು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು