12:17 AM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ನಂಜನಗೂಡು: ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯ ಲೋಕಾರ್ಪಣೆ

21/05/2024, 18:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಲೋಕಾರ್ಪಣೆ ಮಾಡಿದರು.


ನೂತನ ದೇವಾಲಯದಲ್ಲಿ ಶ್ರೀ ನಾಡಮೇಲಮ್ಮ ಅಮ್ಮನವರ ಮೂರ್ತಿಯನ್ನು ಕುಳಿರಿಸಿ ಹೂವಿನಿಂದ ಅಲಂಕಾರ ಮಾಡಿ, ಗ್ರಾಮಸ್ಥರು ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಹೊಸ ನೀರು ತಂದು, ಸತ್ತಿಗೆ, ಸುರ ಪಾಣಿ, ಮಂಗಳವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ದೇವಾಲಯದ ಮುಂಭಾಗದಲ್ಲಿ ಹೋಮ-ಹವನ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಅನ್ನ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ನೂತನ ದೇವಾಲಯವನ್ನು ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು,
ಆದಿಶಕ್ತಿ ಶ್ರೀ ನಾಡಮೇಲಮ್ಮ ಅಮ್ಮನವರ ದೇವಾಲಯವನ್ನು ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ.
ಮುಂಜಾನೆಯಿಂದಲೆ ದೇವಾಲಯದಲ್ಲಿ ಹೋಮ ಹವನ ಮಾಡಿ, ಪೂಜಾ ಕೈಂಕರ್ಯಗಳು ನಡೆದಿವೆ. ದೇವಾಲಯದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಗ್ರಾಮದ ಮಹದೇಶ್ವರಸ್ವಾಮಿ ದೇವಾಲಯದಿಂದ ಮೆರವಣಿಗೆ ಮಾಡಲಾಗಿದೆ, ಈ ವರ್ಷ ಮಳೆಯಾದರೆ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ತುಂಬಾ ಅನುಕೂಲವಾಗಲಿದೆ. ಹಾಗಾಗಿ ಉತ್ತಮ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ನಾನು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಗೋವಿಂದರಾಜು, ಹಾಲು ಉತ್ಪಾದಕರ ಸಂಘದ ಪರೀಕ್ಷಕ ನಂಜನಾಯಕ, ಎಂ.ಜಿ. ಮಂಜುನಾಥ್, ದೇವರಗುಡ್ಡಪ್ಪ ಮಹೇಶ್, ಮುಖಂಡರಾದ ಮಂಚನಾಯಕ, ಮಹದೇವನಾಯಕ, ಯುವ ಮುಖಂಡರಾದ ಭದ್ರನಾಯಕ, ಮನು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು