4:26 PM Thursday26 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

02/02/2025, 16:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸ್ನೇಹಿತ ಸಾಲ ತೀರಿಸದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ತನ್ನ ಹೆಸರಲ್ಲಿ ಸ್ನೇಹಿತನಿಗೆ ಸಿದ್ದೇಶ್ ಬ್ಯಾಂಕ್ ಸಾಲಕೊಡಿಸಿದ್ದರು. ಆದರೆ ಸ್ನೇಹಿತ ಸಾಲ ತೀರಿಸಲಿಲ್ಲ. ಇದರಿಂದ ಮನನೊಂದ
ನಂಜನಗೂಡು ತಾಲೂಕು ಮುಲ್ಲೂಪುರ ಗ್ರಾಮದ ಸಿದ್ದೇಶ್ 40 ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ತಾಲೂಕು ದಂಡಿಕೆರೆ ಗ್ರಾಮದ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ನೇಹಿತ ಮಣಿಕಂಠ ಎಂಬಾತನಿಗೆ ಖಾಸಗಿ ಬ್ಯಾಂಕ್‌ನಲ್ಲಿ ಕಾರು ಸಾಲ
ಸಿದ್ದೇಶ್ ಕೊಡಿಸಿದ್ದರು.
ಜೊತೆಗೆ ತನ್ನ ಹೆಸರಿನಲ್ಲಿ 2 ಲಕ್ಷ ನಗದು ಸಾಲ ಸಹ ಕೊಡಿಸಿದ್ದ ಎನ್ನಲಾಗಿದ್ದು, ಮಣಿಕಂಠ ಕೇವಲ ಎರಡು ಕಂತು ಕಟ್ಟಿ ಸುಮ್ಮನಾಗಿದ್ದರು ಎನ್ನಲಾಗಿದೆ.

ಸಾಲ ತೆಗೆಸಿಕೊಂಡಿದ್ದ ಸ್ನೇಹಿತ ಸಾಲ‌ ತೀರಿಸದ ಕಾರಣ ಖಾಸಗಿ ಬ್ಯಾಂಕ್ ಸಿದ್ದೇಶ್‌ ಗೆ ಸಾಲ ತೀರಿಸುವಂತೆ ಒತ್ತಾಯಿಸಿತ್ತು ಎನ್ನಲಾಗಿದೆ

ಇದರಿಂದ ಮನನೊಂದು ಸಾಲ ಕೊಡಿಸಿದ್ದ ಸಿದ್ದೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುಂಚೆ ಸೆಲ್ಫಿ ವಿಡಿಯೋ ಮಾಡಿ ಸಿ ಎಂ ಸಿದ್ದರಾಮಯ್ಯಗೆ ಮನವಿ ಮಾಡಿಕೊಂಡಿರುವ ಸಿದ್ದೇಶ್ ತನ್ನ ಪತ್ನಿ, ಮಕ್ಕಳು, ತಂದೆ, ತಾಯಿ ಹಾಗೂ ಸಹೋದರರಲ್ಲಿ ಕ್ಷಮೆ ಯಾಚಿಸಿರುವ ಘಟನೆ ಮನ ಕಲಕುವಂತಿದೆ

ಘಟನೆಗೆ ಸಂಬಂಧಿಸಿದಂತೆ ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು