8:02 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಪರ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಚಾರ

31/05/2024, 23:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಅವರ ಪರ ನಂಜನಗೂಡಿನಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು
ನಂಜನಗೂಡು ತಾಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ತೆರಳಿ ಮತದಾರ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು.
ಮತಪ್ರಚಾರಕ್ಕೆ ತೆರಳಿದ ಶಾಸಕರನ್ನು ಕೆಲವು ಶಾಲಾ ಮುಖ್ಯಸ್ಥರು ಮಾಲಾರ್ಪಣೆ ಮಾಡಿ ಶಾಲು ಹೊದಿಸಿ ಗೌರವಿಸಿದರು. ಬಳಿಕ ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ನಮ್ಮ ಪಕ್ಷದ ಅಭ್ಯರ್ಥಿ ಮರಿತಿಬ್ಬೆಗೌಡ ಅವರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಿಕ್ಷಕರಿಗೆ ಅನುಕೂಲ ವಾಗುವಂತಹ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ನಿಮಗೆಲ್ಲಾ ಅವರು ಚಿರಪರಿಚಿತರೆ ಆಗಿದ್ದು ಈಗ ಅವರು ಐದನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಂದಿನ ಶಿಕ್ಷಕರುಗಳ ಭವಿಷ್ಯಕ್ಕಾಗಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು.
ಮತ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಶಾಸಕರಲ್ಲಿ ಮನವಿ ಮಾಡಿಕೊಂಡರು.


ಈ ಸಂದರ್ಭ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಸಿಎಂ ಶಂಕರ್, ಶ್ರೀಕಂಠ ನಾಯಕ ದೊರೆಸ್ವಾಮಿ,ಗುರುಮಲ್ಲಪ್ಪ ಶಶಿರೇಖಾ, ಬಾಲರಾಜ್, ಶಿವಪ್ಪ ದೇವರು, ದೊರೆಸ್ವಾಮಿ ನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು