10:53 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಪರ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಚಾರ

31/05/2024, 23:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಅವರ ಪರ ನಂಜನಗೂಡಿನಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು
ನಂಜನಗೂಡು ತಾಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ತೆರಳಿ ಮತದಾರ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು.
ಮತಪ್ರಚಾರಕ್ಕೆ ತೆರಳಿದ ಶಾಸಕರನ್ನು ಕೆಲವು ಶಾಲಾ ಮುಖ್ಯಸ್ಥರು ಮಾಲಾರ್ಪಣೆ ಮಾಡಿ ಶಾಲು ಹೊದಿಸಿ ಗೌರವಿಸಿದರು. ಬಳಿಕ ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ನಮ್ಮ ಪಕ್ಷದ ಅಭ್ಯರ್ಥಿ ಮರಿತಿಬ್ಬೆಗೌಡ ಅವರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಿಕ್ಷಕರಿಗೆ ಅನುಕೂಲ ವಾಗುವಂತಹ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ನಿಮಗೆಲ್ಲಾ ಅವರು ಚಿರಪರಿಚಿತರೆ ಆಗಿದ್ದು ಈಗ ಅವರು ಐದನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಂದಿನ ಶಿಕ್ಷಕರುಗಳ ಭವಿಷ್ಯಕ್ಕಾಗಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು.
ಮತ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಶಾಸಕರಲ್ಲಿ ಮನವಿ ಮಾಡಿಕೊಂಡರು.


ಈ ಸಂದರ್ಭ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಸಿಎಂ ಶಂಕರ್, ಶ್ರೀಕಂಠ ನಾಯಕ ದೊರೆಸ್ವಾಮಿ,ಗುರುಮಲ್ಲಪ್ಪ ಶಶಿರೇಖಾ, ಬಾಲರಾಜ್, ಶಿವಪ್ಪ ದೇವರು, ದೊರೆಸ್ವಾಮಿ ನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು