1:02 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ವಿವಾದಿತ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಕೆ: ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರ ಘೋಷಣೆ

28/06/2024, 18:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಜೂನ್ 29 ಶನಿವಾರದಂದು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ತಾಲೂಕಿನ ವಿವಾದಿತ ಹಲ್ಲರೆ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವುದಾಗಿ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ಬಸವಣ್ಣ ತಿಳಿಸಿದ್ದಾರೆ.
ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.


ಕಳೆದ ಆರು ತಿಂಗಳ ಹಿಂದೆ ಹಲ್ಲರೆ ಗ್ರಾಮ ಪಂಚಾಯಿತಿ ನಡಾವಳಿಯಂತೆ ಗ್ರಾಮದ ರಸ್ತೆ ಒಂದಕ್ಕೆ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಏರ್ಪಟ್ಟು ನಾಮಫಲಕ ಅಳವಡಿಸುವುದು ಹಾಗೆಯೇ ನಿಂತಿತ್ತು. ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತಾಲೂಕು ತಹಸಿಲ್ದಾರ್ ಹಾಗೂ ಡಿವೈಎಸ್ ಪಿ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ನಡೆಸಿ ಶೀಘ್ರದಲ್ಲೇ ನಾಮಫಲಕ ಅಳವಡಿಸಿ ನ್ಯಾಯ ದೊರಕಿಸಿಕೊಡುವ ಭರವಸೆ ಹಾಗೂ ಗಡುವು ನೀಡಿದ್ದರು.
ಗಡುವು ಮುಗಿದರು ಇನ್ನೂ ಅದರ ಬಗ್ಗೆ ಯಾವುದೇ ಮಾಹಿತಿ ಹಾಗೂ ಕಾರ್ಯಕ್ರಮ ರೂಪಿಸದೆ ಇರುವುದು ನಿಜಕ್ಕೂ ತಾಲೂಕು ಮತ್ತು ಜಿಲ್ಲಾ ಆಡಳಿತಕ್ಕೆ ನಮ್ಮ ಧಿಕ್ಕಾರವಿದೆ ಎಂದರು.
ತಾಲೂಕು ಮತ್ತು ಜಿಲ್ಲಾ ಆಡಳಿತ ವೈಫಲ್ಯ ಖಂಡಿಸಿ ಇದೆ 29ನೇ ತಾರೀಕಿನಂದು ಶನಿವಾರ ನಂಜನಗೂಡಿನಿಂದ ಹಲ್ಲರೆ ಗ್ರಾಮಕ್ಕೆ ಪಾದಯಾತ್ರೆ ನಡೆಸುವ ಮೂಲಕ ಹಲ್ಲರೆ ಚಲೋ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಪರ ಸಂಘಟನೆಗಳ ನೂರಾರು ಕಾರ್ಯಕರ್ತ ಮುಖಂಡರು ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಒಂದು ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಇದಕ್ಕೆ ತಾಲೂಕು ಮತ್ತು ಜಿಲ್ಲಾಡಳಿತವೇ ನೇರ ಹೊಣೆಗಾರರಾಗಬೇಕಾಗುತ್ತದೆ. ಇಲ್ಲಿ ನಿಜವಾದ ಅಂಬೇಡ್ಕರ್ ವಿರೋಧಿಗಳು ಅಧಿಕಾರಿಗಳೇ ಎಂದು ಕಿಡಿ ಕಾರಿದರು.
ಇದು ಸಿಎಂ ತವರು ಜಿಲ್ಲೆ ಆದ್ದರಿಂದ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಪುಟ್ಟಸ್ವಾಮಿ ಪ್ರಧಾನ ಕಾರ್ಯದರ್ಶಿ ಜಯ ಶಂಕರ್ ಸಹಕಾರ್ಯದರ್ಶಿ ಕುಮಾರ್ ಖಜಾಂಚಿ ಯಶವಂತ್ ಕುಮಾರ್ ಮಾಧ್ಯಮ ಕಾರ್ಯದರ್ಶಿ ಪ್ರಶಾಂತ್ ಮುಖಂಡರಾದ ಅಭಿ ನಾಗಭೂಷಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು