2:54 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಲ್ಲದೆ ನಡೆದೇ ಬಿಟ್ಟಿತು ಮಹಿಳಾ ಗ್ರಾಮ ಸಭೆ..!

20/11/2024, 20:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರಿಲ್ಲದ ಮಹಿಳಾ ಗ್ರಾಮ ಸಭೆ ನಡೆಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಬಿಳಿಗೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ, ಆರೋಗ್ಯ ಗ್ರಾಮ, ಗ್ರಾಮ ನೈರ್ಮಲ್ಯ ತರಬೇತಿಯನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗೆ ಮಾಹಿತಿ ನೀಡದೆ ಗ್ರಾಮ ಸಭೆಯನ್ನು ಬಿಳಿಗೆರೆ ಗ್ರಾ.ಪಂ ಆಡಳಿತ ನಡೆಸುತ್ತಿತ್ತು. ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಮತ್ತು ಬೆಳಗುಂದ ಅರ್ಜುನ್ ಸಭೆಗೆ ಹಾಜರಾಗಿ ಪಿಡಿಒ ವಿರುದ್ಧ ಕಿಡಿಕಾರಿದ್ದಾರೆ.

ಮೂರು ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರನ್ನು ಆಹ್ವಾನಿಸದೆ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೀಮಿತವಾಗಿದೆ. ಮಹಿಳೆಯರು ಇಲ್ಲದೆ ಮಹಿಳಾ ಗ್ರಾಮ ಸಭೆ ನಡೆಸಲಾಗುತ್ತಿದೆ. ಮಹಿಳೆಯರ ಕುಂದು ಕೊರತೆ ಬಗೆಹರಿಸಲು ಮಹಿಳಾ ಗ್ರಾಮ ಸಭೆಯನ್ನು ಕರೆಯಲಾಗಿದೆ. ಮಹಿಳಾ ಗ್ರಾಮ ಸಭೆಯ ಬಗ್ಗೆ ಟಾಮ್ ಟಾಮ್ ಹೊಡೆಸಿ ಪ್ರತಿ ಮಹಿಳೆಯರಿಗೂ ಸಭೆಯ ಬಗ್ಗೆ ತಿಳಿಸಬೇಕು. ಹಾಗೇಯೇ ಪ್ರತಿ ಹಳ್ಳಿಗಳಲ್ಲಿಯೂ ಮಹಿಳಾ ಗ್ರಾಮ ಸಭೆ ಮಾಡಬೇಕು.
ಆದರೆ, ಬಿಳಿಗೆರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಗಣೇಶ್ ಕಾರ್ಯದರ್ಶಿ ಪುಟ್ಟರಾಜು ನಿಯಮಗಳನ್ನು ಗಾಳಿಗೆ ತೂರಿ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ. ಮಹಿಳೆಯರಿಗೆ ಯಾವುದೇ ಮಾಹಿತಿ ನೀಡದೆ ಕೇವಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಹಿಳಾ ಗ್ರಾಮ ಸಭೆ ಸೀಮಿತವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತಿ ಆಡಳಿತ ಕಾಟಚಾರಕ್ಕೆ ಈ ಸಭೆಗಳನ್ನು ಮಾಡಿದ್ದಾರೆ. ಈ ಕೂಡಲೇ ಮಹಿಳಾ ಗ್ರಾಮ ಸಭೆಯನ್ನು ಮುಂದೂಡಬೇಕು. ಪಿಡಿಒ ಮತ್ತು ಕಾರ್ಯದರ್ಶಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು