5:10 AM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಲ್ಲದೆ ನಡೆದೇ ಬಿಟ್ಟಿತು ಮಹಿಳಾ ಗ್ರಾಮ ಸಭೆ..!

20/11/2024, 20:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರಿಲ್ಲದ ಮಹಿಳಾ ಗ್ರಾಮ ಸಭೆ ನಡೆಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಬಿಳಿಗೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ, ಆರೋಗ್ಯ ಗ್ರಾಮ, ಗ್ರಾಮ ನೈರ್ಮಲ್ಯ ತರಬೇತಿಯನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗೆ ಮಾಹಿತಿ ನೀಡದೆ ಗ್ರಾಮ ಸಭೆಯನ್ನು ಬಿಳಿಗೆರೆ ಗ್ರಾ.ಪಂ ಆಡಳಿತ ನಡೆಸುತ್ತಿತ್ತು. ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಮತ್ತು ಬೆಳಗುಂದ ಅರ್ಜುನ್ ಸಭೆಗೆ ಹಾಜರಾಗಿ ಪಿಡಿಒ ವಿರುದ್ಧ ಕಿಡಿಕಾರಿದ್ದಾರೆ.

ಮೂರು ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರನ್ನು ಆಹ್ವಾನಿಸದೆ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೀಮಿತವಾಗಿದೆ. ಮಹಿಳೆಯರು ಇಲ್ಲದೆ ಮಹಿಳಾ ಗ್ರಾಮ ಸಭೆ ನಡೆಸಲಾಗುತ್ತಿದೆ. ಮಹಿಳೆಯರ ಕುಂದು ಕೊರತೆ ಬಗೆಹರಿಸಲು ಮಹಿಳಾ ಗ್ರಾಮ ಸಭೆಯನ್ನು ಕರೆಯಲಾಗಿದೆ. ಮಹಿಳಾ ಗ್ರಾಮ ಸಭೆಯ ಬಗ್ಗೆ ಟಾಮ್ ಟಾಮ್ ಹೊಡೆಸಿ ಪ್ರತಿ ಮಹಿಳೆಯರಿಗೂ ಸಭೆಯ ಬಗ್ಗೆ ತಿಳಿಸಬೇಕು. ಹಾಗೇಯೇ ಪ್ರತಿ ಹಳ್ಳಿಗಳಲ್ಲಿಯೂ ಮಹಿಳಾ ಗ್ರಾಮ ಸಭೆ ಮಾಡಬೇಕು.
ಆದರೆ, ಬಿಳಿಗೆರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಗಣೇಶ್ ಕಾರ್ಯದರ್ಶಿ ಪುಟ್ಟರಾಜು ನಿಯಮಗಳನ್ನು ಗಾಳಿಗೆ ತೂರಿ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ. ಮಹಿಳೆಯರಿಗೆ ಯಾವುದೇ ಮಾಹಿತಿ ನೀಡದೆ ಕೇವಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಹಿಳಾ ಗ್ರಾಮ ಸಭೆ ಸೀಮಿತವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತಿ ಆಡಳಿತ ಕಾಟಚಾರಕ್ಕೆ ಈ ಸಭೆಗಳನ್ನು ಮಾಡಿದ್ದಾರೆ. ಈ ಕೂಡಲೇ ಮಹಿಳಾ ಗ್ರಾಮ ಸಭೆಯನ್ನು ಮುಂದೂಡಬೇಕು. ಪಿಡಿಒ ಮತ್ತು ಕಾರ್ಯದರ್ಶಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು