2:28 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಲ್ಲದೆ ನಡೆದೇ ಬಿಟ್ಟಿತು ಮಹಿಳಾ ಗ್ರಾಮ ಸಭೆ..!

20/11/2024, 20:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರಿಲ್ಲದ ಮಹಿಳಾ ಗ್ರಾಮ ಸಭೆ ನಡೆಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಬಿಳಿಗೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ, ಆರೋಗ್ಯ ಗ್ರಾಮ, ಗ್ರಾಮ ನೈರ್ಮಲ್ಯ ತರಬೇತಿಯನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗೆ ಮಾಹಿತಿ ನೀಡದೆ ಗ್ರಾಮ ಸಭೆಯನ್ನು ಬಿಳಿಗೆರೆ ಗ್ರಾ.ಪಂ ಆಡಳಿತ ನಡೆಸುತ್ತಿತ್ತು. ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಮತ್ತು ಬೆಳಗುಂದ ಅರ್ಜುನ್ ಸಭೆಗೆ ಹಾಜರಾಗಿ ಪಿಡಿಒ ವಿರುದ್ಧ ಕಿಡಿಕಾರಿದ್ದಾರೆ.

ಮೂರು ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರನ್ನು ಆಹ್ವಾನಿಸದೆ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೀಮಿತವಾಗಿದೆ. ಮಹಿಳೆಯರು ಇಲ್ಲದೆ ಮಹಿಳಾ ಗ್ರಾಮ ಸಭೆ ನಡೆಸಲಾಗುತ್ತಿದೆ. ಮಹಿಳೆಯರ ಕುಂದು ಕೊರತೆ ಬಗೆಹರಿಸಲು ಮಹಿಳಾ ಗ್ರಾಮ ಸಭೆಯನ್ನು ಕರೆಯಲಾಗಿದೆ. ಮಹಿಳಾ ಗ್ರಾಮ ಸಭೆಯ ಬಗ್ಗೆ ಟಾಮ್ ಟಾಮ್ ಹೊಡೆಸಿ ಪ್ರತಿ ಮಹಿಳೆಯರಿಗೂ ಸಭೆಯ ಬಗ್ಗೆ ತಿಳಿಸಬೇಕು. ಹಾಗೇಯೇ ಪ್ರತಿ ಹಳ್ಳಿಗಳಲ್ಲಿಯೂ ಮಹಿಳಾ ಗ್ರಾಮ ಸಭೆ ಮಾಡಬೇಕು.
ಆದರೆ, ಬಿಳಿಗೆರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಗಣೇಶ್ ಕಾರ್ಯದರ್ಶಿ ಪುಟ್ಟರಾಜು ನಿಯಮಗಳನ್ನು ಗಾಳಿಗೆ ತೂರಿ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ. ಮಹಿಳೆಯರಿಗೆ ಯಾವುದೇ ಮಾಹಿತಿ ನೀಡದೆ ಕೇವಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಹಿಳಾ ಗ್ರಾಮ ಸಭೆ ಸೀಮಿತವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತಿ ಆಡಳಿತ ಕಾಟಚಾರಕ್ಕೆ ಈ ಸಭೆಗಳನ್ನು ಮಾಡಿದ್ದಾರೆ. ಈ ಕೂಡಲೇ ಮಹಿಳಾ ಗ್ರಾಮ ಸಭೆಯನ್ನು ಮುಂದೂಡಬೇಕು. ಪಿಡಿಒ ಮತ್ತು ಕಾರ್ಯದರ್ಶಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು