12:31 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಲ್ಲದೆ ನಡೆದೇ ಬಿಟ್ಟಿತು ಮಹಿಳಾ ಗ್ರಾಮ ಸಭೆ..!

20/11/2024, 20:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರಿಲ್ಲದ ಮಹಿಳಾ ಗ್ರಾಮ ಸಭೆ ನಡೆಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಬಿಳಿಗೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ, ಆರೋಗ್ಯ ಗ್ರಾಮ, ಗ್ರಾಮ ನೈರ್ಮಲ್ಯ ತರಬೇತಿಯನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗೆ ಮಾಹಿತಿ ನೀಡದೆ ಗ್ರಾಮ ಸಭೆಯನ್ನು ಬಿಳಿಗೆರೆ ಗ್ರಾ.ಪಂ ಆಡಳಿತ ನಡೆಸುತ್ತಿತ್ತು. ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಮತ್ತು ಬೆಳಗುಂದ ಅರ್ಜುನ್ ಸಭೆಗೆ ಹಾಜರಾಗಿ ಪಿಡಿಒ ವಿರುದ್ಧ ಕಿಡಿಕಾರಿದ್ದಾರೆ.

ಮೂರು ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರನ್ನು ಆಹ್ವಾನಿಸದೆ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೀಮಿತವಾಗಿದೆ. ಮಹಿಳೆಯರು ಇಲ್ಲದೆ ಮಹಿಳಾ ಗ್ರಾಮ ಸಭೆ ನಡೆಸಲಾಗುತ್ತಿದೆ. ಮಹಿಳೆಯರ ಕುಂದು ಕೊರತೆ ಬಗೆಹರಿಸಲು ಮಹಿಳಾ ಗ್ರಾಮ ಸಭೆಯನ್ನು ಕರೆಯಲಾಗಿದೆ. ಮಹಿಳಾ ಗ್ರಾಮ ಸಭೆಯ ಬಗ್ಗೆ ಟಾಮ್ ಟಾಮ್ ಹೊಡೆಸಿ ಪ್ರತಿ ಮಹಿಳೆಯರಿಗೂ ಸಭೆಯ ಬಗ್ಗೆ ತಿಳಿಸಬೇಕು. ಹಾಗೇಯೇ ಪ್ರತಿ ಹಳ್ಳಿಗಳಲ್ಲಿಯೂ ಮಹಿಳಾ ಗ್ರಾಮ ಸಭೆ ಮಾಡಬೇಕು.
ಆದರೆ, ಬಿಳಿಗೆರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಗಣೇಶ್ ಕಾರ್ಯದರ್ಶಿ ಪುಟ್ಟರಾಜು ನಿಯಮಗಳನ್ನು ಗಾಳಿಗೆ ತೂರಿ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ. ಮಹಿಳೆಯರಿಗೆ ಯಾವುದೇ ಮಾಹಿತಿ ನೀಡದೆ ಕೇವಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಹಿಳಾ ಗ್ರಾಮ ಸಭೆ ಸೀಮಿತವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತಿ ಆಡಳಿತ ಕಾಟಚಾರಕ್ಕೆ ಈ ಸಭೆಗಳನ್ನು ಮಾಡಿದ್ದಾರೆ. ಈ ಕೂಡಲೇ ಮಹಿಳಾ ಗ್ರಾಮ ಸಭೆಯನ್ನು ಮುಂದೂಡಬೇಕು. ಪಿಡಿಒ ಮತ್ತು ಕಾರ್ಯದರ್ಶಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು