9:16 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಲ್ಲದೆ ನಡೆದೇ ಬಿಟ್ಟಿತು ಮಹಿಳಾ ಗ್ರಾಮ ಸಭೆ..!

20/11/2024, 20:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರಿಲ್ಲದ ಮಹಿಳಾ ಗ್ರಾಮ ಸಭೆ ನಡೆಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಬಿಳಿಗೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ, ಆರೋಗ್ಯ ಗ್ರಾಮ, ಗ್ರಾಮ ನೈರ್ಮಲ್ಯ ತರಬೇತಿಯನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗೆ ಮಾಹಿತಿ ನೀಡದೆ ಗ್ರಾಮ ಸಭೆಯನ್ನು ಬಿಳಿಗೆರೆ ಗ್ರಾ.ಪಂ ಆಡಳಿತ ನಡೆಸುತ್ತಿತ್ತು. ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಮತ್ತು ಬೆಳಗುಂದ ಅರ್ಜುನ್ ಸಭೆಗೆ ಹಾಜರಾಗಿ ಪಿಡಿಒ ವಿರುದ್ಧ ಕಿಡಿಕಾರಿದ್ದಾರೆ.

ಮೂರು ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರನ್ನು ಆಹ್ವಾನಿಸದೆ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೀಮಿತವಾಗಿದೆ. ಮಹಿಳೆಯರು ಇಲ್ಲದೆ ಮಹಿಳಾ ಗ್ರಾಮ ಸಭೆ ನಡೆಸಲಾಗುತ್ತಿದೆ. ಮಹಿಳೆಯರ ಕುಂದು ಕೊರತೆ ಬಗೆಹರಿಸಲು ಮಹಿಳಾ ಗ್ರಾಮ ಸಭೆಯನ್ನು ಕರೆಯಲಾಗಿದೆ. ಮಹಿಳಾ ಗ್ರಾಮ ಸಭೆಯ ಬಗ್ಗೆ ಟಾಮ್ ಟಾಮ್ ಹೊಡೆಸಿ ಪ್ರತಿ ಮಹಿಳೆಯರಿಗೂ ಸಭೆಯ ಬಗ್ಗೆ ತಿಳಿಸಬೇಕು. ಹಾಗೇಯೇ ಪ್ರತಿ ಹಳ್ಳಿಗಳಲ್ಲಿಯೂ ಮಹಿಳಾ ಗ್ರಾಮ ಸಭೆ ಮಾಡಬೇಕು.
ಆದರೆ, ಬಿಳಿಗೆರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಗಣೇಶ್ ಕಾರ್ಯದರ್ಶಿ ಪುಟ್ಟರಾಜು ನಿಯಮಗಳನ್ನು ಗಾಳಿಗೆ ತೂರಿ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ. ಮಹಿಳೆಯರಿಗೆ ಯಾವುದೇ ಮಾಹಿತಿ ನೀಡದೆ ಕೇವಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಹಿಳಾ ಗ್ರಾಮ ಸಭೆ ಸೀಮಿತವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತಿ ಆಡಳಿತ ಕಾಟಚಾರಕ್ಕೆ ಈ ಸಭೆಗಳನ್ನು ಮಾಡಿದ್ದಾರೆ. ಈ ಕೂಡಲೇ ಮಹಿಳಾ ಗ್ರಾಮ ಸಭೆಯನ್ನು ಮುಂದೂಡಬೇಕು. ಪಿಡಿಒ ಮತ್ತು ಕಾರ್ಯದರ್ಶಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು