9:07 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

25/01/2025, 21:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ 70 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಅವರುತಾಲೂಕಿನ ಶ್ರೀ ಕ್ಷೇತ್ರ ಸಂಗಮ, ಕಪ್ಪಸೋಗೆ, ದೇಬೂರು, ಉಪ್ಪಿನಹಳ್ಳಿ ಗ್ರಾಮಗಳಲ್ಲಿ 2 ಕೋಟಿ 70 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸಂಗಮ ಕ್ಷೇತ್ರದಲ್ಲಿ ಮಾತನಾಡಿದರು.


ತಾಲೂಕಿನ ಮಹಾದೇವತಾತ ರವರ ಸಂಗಮ ಒಂದು ಪುಣ್ಯ ಕ್ಷೇತ್ರವಾಗಿದೆ ಇಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಕೇವಲ ಬದ್ದತೆ ಮತ್ತು ಸೇವೆಯ ಉದ್ದೇಶದಿಂದಾಗಿ 1 ಕೋಟಿ 50 ಲಕ್ಷ ರು ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಗಮ ಕ್ಷೇತ್ರದ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ನನಗೆ ಸೂಚನೆ ನೀಡುವ ಮೂಲಕ ಅವರು ಸೇವೆಯ ಬದ್ಧತೆಯನ್ನು ತೋರಿದ್ದಾರೆ. ಮುಂದೆ ಹಂತ ಹಂತವಾಗಿ ಸಂಗಮ ಕ್ಷೇತ್ರದ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಅಲ್ಲದೆ ಕಪ್ಪಸೋಗೆ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನುಗುನಾಲೆಗೆ ಸೇತುವೆ ನಿರ್ಮಾಣ, ದೇಬೂರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 50 ಲಕ್ಷ ವೆಚ್ಚದಲ್ಲಿ ರಾಜ್ಯ ಹೆದ್ದಾರಿ 57ರಲ್ಲಿ ಕಲ್ವರ್ಟ್ ನಿರ್ಮಾಣ ಕಾಮಗಾರಿ, ಕಾಡ ಇಲಾಖೆಯ ಅನುದಾನದಲ್ಲಿ ತಾಲೂಕಿನ ಉಪ್ಪಿನ ಹಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಶ್ರೀಕಂಠನಾಯಕ, ಸಂಗಮ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ, ಮಾಜಿ ಅಧ್ಯಕ್ಷ ಕೆಂಡಗಣ್ಣಪ್ಪ, ಕಾಂಗ್ರೆಸ್ ಎಸ್ಸಿ ಬ್ಲಾಕ್ ಅಧ್ಯಕ್ಷ ಉಪ್ಪಿನಹಳ್ಳಿ ಶಿವಣ್ಣ, ಹಾಡ್ಯ ಗ್ರಾಪಂ ಅಧ್ಯಕ್ಷ ಹರೀಶ್, ಮುಖಂಡರಾದ ಕುರಿಹುಂಡಿರಾಜು,, ಎಂ.ಮಾದಪ್ಪ, ಸಂಗರಾಜು, ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು