10:44 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

25/01/2025, 21:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ 70 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಅವರುತಾಲೂಕಿನ ಶ್ರೀ ಕ್ಷೇತ್ರ ಸಂಗಮ, ಕಪ್ಪಸೋಗೆ, ದೇಬೂರು, ಉಪ್ಪಿನಹಳ್ಳಿ ಗ್ರಾಮಗಳಲ್ಲಿ 2 ಕೋಟಿ 70 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸಂಗಮ ಕ್ಷೇತ್ರದಲ್ಲಿ ಮಾತನಾಡಿದರು.


ತಾಲೂಕಿನ ಮಹಾದೇವತಾತ ರವರ ಸಂಗಮ ಒಂದು ಪುಣ್ಯ ಕ್ಷೇತ್ರವಾಗಿದೆ ಇಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಕೇವಲ ಬದ್ದತೆ ಮತ್ತು ಸೇವೆಯ ಉದ್ದೇಶದಿಂದಾಗಿ 1 ಕೋಟಿ 50 ಲಕ್ಷ ರು ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಗಮ ಕ್ಷೇತ್ರದ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ನನಗೆ ಸೂಚನೆ ನೀಡುವ ಮೂಲಕ ಅವರು ಸೇವೆಯ ಬದ್ಧತೆಯನ್ನು ತೋರಿದ್ದಾರೆ. ಮುಂದೆ ಹಂತ ಹಂತವಾಗಿ ಸಂಗಮ ಕ್ಷೇತ್ರದ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಅಲ್ಲದೆ ಕಪ್ಪಸೋಗೆ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನುಗುನಾಲೆಗೆ ಸೇತುವೆ ನಿರ್ಮಾಣ, ದೇಬೂರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 50 ಲಕ್ಷ ವೆಚ್ಚದಲ್ಲಿ ರಾಜ್ಯ ಹೆದ್ದಾರಿ 57ರಲ್ಲಿ ಕಲ್ವರ್ಟ್ ನಿರ್ಮಾಣ ಕಾಮಗಾರಿ, ಕಾಡ ಇಲಾಖೆಯ ಅನುದಾನದಲ್ಲಿ ತಾಲೂಕಿನ ಉಪ್ಪಿನ ಹಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಶ್ರೀಕಂಠನಾಯಕ, ಸಂಗಮ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ, ಮಾಜಿ ಅಧ್ಯಕ್ಷ ಕೆಂಡಗಣ್ಣಪ್ಪ, ಕಾಂಗ್ರೆಸ್ ಎಸ್ಸಿ ಬ್ಲಾಕ್ ಅಧ್ಯಕ್ಷ ಉಪ್ಪಿನಹಳ್ಳಿ ಶಿವಣ್ಣ, ಹಾಡ್ಯ ಗ್ರಾಪಂ ಅಧ್ಯಕ್ಷ ಹರೀಶ್, ಮುಖಂಡರಾದ ಕುರಿಹುಂಡಿರಾಜು,, ಎಂ.ಮಾದಪ್ಪ, ಸಂಗರಾಜು, ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು