7:49 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ನಂಜನಗೂಡು ನಾಗರಿಕ ವೇದಿಕೆಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ

13/05/2024, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಾಗರಿಕ ವೇದಿಕೆ ವತಿಯಿಂದ ‍ಚಾಮರಾಜನಗರ ಲೋಕಸಭಾ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
ನುಡಿ ನಮನ ಸಲ್ಲಿಸಿ, ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿದರು. ನಾನು ಇವತ್ತು ವಕೀಲ, ಕಾನೂನು ವಿದ್ಯಾರ್ಥಿಯಾಗಿದ್ದಿನಿ ಎಂದರೆ ಅದಕ್ಕೆ ಪ್ರಸಾದ್ ಸಾಹೇಬರ ಸಲಹೆ ಸೂಚನೆ ಕಾರಣ. ಅವರ ಅಗಲಿಕೆ ನಮ್ಮ ರಾಜ್ಯ, ನಮ್ಮ ತಾಲ್ಲೂಕಿಗೆ ನಷ್ಟ ಉಂಟುಮಾಡಿದೆ.‌ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಂದರು.


ಬಳಿಕ ಚಿಂತಕ ದೇವನೂರು ಶಂಕರ್ ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ರವರು, ಬುದ್ಧ, ಬಸವ ,ಅಂಬೇಡ್ಕರ್ ರವರ, ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು. ಹಿಂದುಳಿದ ವರ್ಗಗಳ, ದಲಿತರ ಮತ್ತು ಶೋಷಿತರ ಗಟ್ಟಿ ಧ್ವನಿಯಾಗಿದ್ದರು ಆದರೆ ಎಂದು ಕೂಡ ದ್ವೇಷ ರಾಜಕಾರಣ ಮಾಡಲಿಲ್ಲ. ತಮ್ಮ ಜೀವನವನ್ನು ಸಮಾಜಕಾಗಿ ಅರ್ಪಿಸಿಕೊಂಡಿದ್ದರು. ಎಲ್ಲರನ್ನೂ ಪ್ರೀತಿಸುತ್ತಿದ್ದರು.
ಮಾನವ ಸಂಬಂಧಗಳು ಗಟ್ಟಿಗೋಳ್ಳಬೇಕಾದರೆ ಪ್ರೀತಿ, ಅಂತಃಕರಣ, ಮೈತ್ರಿಯಿಂದ ಸಾಧ್ಯ ಎಂದು ನಂಬಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಹರವೆ ಮಠದ ಶ್ರೀಗಳಾದ ಸರ್ಪ ಭೂಷಣ ಸ್ವಾಮೀಜಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬಿಜೆಪಿ ಮುಖಂಡ ಎಸ್.ಮಹದೇವಯ್ಯ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು