1:57 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ

12/01/2024, 19:45

ಮೋಹನ್ ನಂಜನಗೂಡು ಮೈಸೂರು

info.reporterkarnatak@gmail.com
ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಇಂದು ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಹಾಗೂ ಹರತಲೆ ಗ್ರಾಮಗಳು ಸೇರಿದಂತೆ ವಿವಿಧಡೆ ವಿತರಣೆ ಮಾಡಲಾಯಿತು.


ಹೆಗ್ಗಡಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಹರತಲೆ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿದ ಬಳಿಕ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು. ಪಕ್ಷದ ಹಾಗೂ ಗ್ರಾಮದ ಮುಖಂಡರ ಜತೆಗೂಡಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮಹಿಳೆಯರು ಮಂತ್ರಾಕ್ಷತೆಗೆ ದೀಪ ಬೆಳಗಿ ಪೂಜೆ ಸಲ್ಲಿಸಿ ಭಕ್ತಿ ಭಾವದೊಂದಿಗೆ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಂತ್ರಾಕ್ಷತೆ ವಿತರಣೆಗೆ ಬಂದ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ನಂತರ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಂಡಲ ಅಧ್ಯಕ್ಷ ಮಹೇಶ್ ಮಾತನಾಡಿ ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಅಂಗವಾಗಿ ಅಲ್ಲಿಂದ ಮಂತ್ರಾಕ್ಷತೆ ಕಳುಹಿಸಿ ಇಡೀ ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅದರಂತೆ ಇಲ್ಲೂ ಕೂಡ ಯಾವುದೇ ಪಕ್ಷಾತೀತ,ಜಾತ್ಯತೀತ, ಧರ್ಮಾತೀತ ಎನ್ನದೆ ಎಲ್ಲಾ ಭಾರತೀಯರಿಗೂ ಈ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಪಂ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಪಂ ಮಾಜಿ ಸದಸ್ಯರುಗಳಾದ ಬಸವರಾಜು, ರವಿ ಗ್ರಾಪಂ ಅಧ್ಯಕ್ಷ ಮನೋಜ್ ಸದಸ್ಯ ಗೋವಿಂದರಾಜ್ ಮುಖಂಡರುಗಳಾದ ಸಂಜಯ್ , ದೊಡ್ಡಂಕಶೆಟ್ಟಿ,ಮಹದೇವಸ್ವಾಮಿ ,ಪುಟ್ಟಸ್ವಾಮಿ, ಮಹೇಶ್ ಬಾಬು, ಪ್ರಕಾಶ್, ಗಂಗಾಧರ್, ಚಂದ್ರು ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು