2:19 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ

12/01/2024, 19:45

ಮೋಹನ್ ನಂಜನಗೂಡು ಮೈಸೂರು

info.reporterkarnatak@gmail.com
ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಇಂದು ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಹಾಗೂ ಹರತಲೆ ಗ್ರಾಮಗಳು ಸೇರಿದಂತೆ ವಿವಿಧಡೆ ವಿತರಣೆ ಮಾಡಲಾಯಿತು.


ಹೆಗ್ಗಡಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಹರತಲೆ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿದ ಬಳಿಕ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು. ಪಕ್ಷದ ಹಾಗೂ ಗ್ರಾಮದ ಮುಖಂಡರ ಜತೆಗೂಡಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮಹಿಳೆಯರು ಮಂತ್ರಾಕ್ಷತೆಗೆ ದೀಪ ಬೆಳಗಿ ಪೂಜೆ ಸಲ್ಲಿಸಿ ಭಕ್ತಿ ಭಾವದೊಂದಿಗೆ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಂತ್ರಾಕ್ಷತೆ ವಿತರಣೆಗೆ ಬಂದ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ನಂತರ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಂಡಲ ಅಧ್ಯಕ್ಷ ಮಹೇಶ್ ಮಾತನಾಡಿ ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಅಂಗವಾಗಿ ಅಲ್ಲಿಂದ ಮಂತ್ರಾಕ್ಷತೆ ಕಳುಹಿಸಿ ಇಡೀ ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅದರಂತೆ ಇಲ್ಲೂ ಕೂಡ ಯಾವುದೇ ಪಕ್ಷಾತೀತ,ಜಾತ್ಯತೀತ, ಧರ್ಮಾತೀತ ಎನ್ನದೆ ಎಲ್ಲಾ ಭಾರತೀಯರಿಗೂ ಈ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಪಂ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಪಂ ಮಾಜಿ ಸದಸ್ಯರುಗಳಾದ ಬಸವರಾಜು, ರವಿ ಗ್ರಾಪಂ ಅಧ್ಯಕ್ಷ ಮನೋಜ್ ಸದಸ್ಯ ಗೋವಿಂದರಾಜ್ ಮುಖಂಡರುಗಳಾದ ಸಂಜಯ್ , ದೊಡ್ಡಂಕಶೆಟ್ಟಿ,ಮಹದೇವಸ್ವಾಮಿ ,ಪುಟ್ಟಸ್ವಾಮಿ, ಮಹೇಶ್ ಬಾಬು, ಪ್ರಕಾಶ್, ಗಂಗಾಧರ್, ಚಂದ್ರು ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು