4:42 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ

12/01/2024, 19:45

ಮೋಹನ್ ನಂಜನಗೂಡು ಮೈಸೂರು

info.reporterkarnatak@gmail.com
ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಇಂದು ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಹಾಗೂ ಹರತಲೆ ಗ್ರಾಮಗಳು ಸೇರಿದಂತೆ ವಿವಿಧಡೆ ವಿತರಣೆ ಮಾಡಲಾಯಿತು.


ಹೆಗ್ಗಡಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಹರತಲೆ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿದ ಬಳಿಕ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು. ಪಕ್ಷದ ಹಾಗೂ ಗ್ರಾಮದ ಮುಖಂಡರ ಜತೆಗೂಡಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮಹಿಳೆಯರು ಮಂತ್ರಾಕ್ಷತೆಗೆ ದೀಪ ಬೆಳಗಿ ಪೂಜೆ ಸಲ್ಲಿಸಿ ಭಕ್ತಿ ಭಾವದೊಂದಿಗೆ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಂತ್ರಾಕ್ಷತೆ ವಿತರಣೆಗೆ ಬಂದ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ನಂತರ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಂಡಲ ಅಧ್ಯಕ್ಷ ಮಹೇಶ್ ಮಾತನಾಡಿ ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಅಂಗವಾಗಿ ಅಲ್ಲಿಂದ ಮಂತ್ರಾಕ್ಷತೆ ಕಳುಹಿಸಿ ಇಡೀ ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅದರಂತೆ ಇಲ್ಲೂ ಕೂಡ ಯಾವುದೇ ಪಕ್ಷಾತೀತ,ಜಾತ್ಯತೀತ, ಧರ್ಮಾತೀತ ಎನ್ನದೆ ಎಲ್ಲಾ ಭಾರತೀಯರಿಗೂ ಈ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಪಂ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಪಂ ಮಾಜಿ ಸದಸ್ಯರುಗಳಾದ ಬಸವರಾಜು, ರವಿ ಗ್ರಾಪಂ ಅಧ್ಯಕ್ಷ ಮನೋಜ್ ಸದಸ್ಯ ಗೋವಿಂದರಾಜ್ ಮುಖಂಡರುಗಳಾದ ಸಂಜಯ್ , ದೊಡ್ಡಂಕಶೆಟ್ಟಿ,ಮಹದೇವಸ್ವಾಮಿ ,ಪುಟ್ಟಸ್ವಾಮಿ, ಮಹೇಶ್ ಬಾಬು, ಪ್ರಕಾಶ್, ಗಂಗಾಧರ್, ಚಂದ್ರು ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು