10:05 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ

12/01/2024, 19:45

ಮೋಹನ್ ನಂಜನಗೂಡು ಮೈಸೂರು

info.reporterkarnatak@gmail.com
ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಇಂದು ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಹಾಗೂ ಹರತಲೆ ಗ್ರಾಮಗಳು ಸೇರಿದಂತೆ ವಿವಿಧಡೆ ವಿತರಣೆ ಮಾಡಲಾಯಿತು.


ಹೆಗ್ಗಡಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಹರತಲೆ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿದ ಬಳಿಕ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು. ಪಕ್ಷದ ಹಾಗೂ ಗ್ರಾಮದ ಮುಖಂಡರ ಜತೆಗೂಡಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮಹಿಳೆಯರು ಮಂತ್ರಾಕ್ಷತೆಗೆ ದೀಪ ಬೆಳಗಿ ಪೂಜೆ ಸಲ್ಲಿಸಿ ಭಕ್ತಿ ಭಾವದೊಂದಿಗೆ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಂತ್ರಾಕ್ಷತೆ ವಿತರಣೆಗೆ ಬಂದ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ನಂತರ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಂಡಲ ಅಧ್ಯಕ್ಷ ಮಹೇಶ್ ಮಾತನಾಡಿ ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಅಂಗವಾಗಿ ಅಲ್ಲಿಂದ ಮಂತ್ರಾಕ್ಷತೆ ಕಳುಹಿಸಿ ಇಡೀ ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅದರಂತೆ ಇಲ್ಲೂ ಕೂಡ ಯಾವುದೇ ಪಕ್ಷಾತೀತ,ಜಾತ್ಯತೀತ, ಧರ್ಮಾತೀತ ಎನ್ನದೆ ಎಲ್ಲಾ ಭಾರತೀಯರಿಗೂ ಈ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಪಂ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಪಂ ಮಾಜಿ ಸದಸ್ಯರುಗಳಾದ ಬಸವರಾಜು, ರವಿ ಗ್ರಾಪಂ ಅಧ್ಯಕ್ಷ ಮನೋಜ್ ಸದಸ್ಯ ಗೋವಿಂದರಾಜ್ ಮುಖಂಡರುಗಳಾದ ಸಂಜಯ್ , ದೊಡ್ಡಂಕಶೆಟ್ಟಿ,ಮಹದೇವಸ್ವಾಮಿ ,ಪುಟ್ಟಸ್ವಾಮಿ, ಮಹೇಶ್ ಬಾಬು, ಪ್ರಕಾಶ್, ಗಂಗಾಧರ್, ಚಂದ್ರು ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು