3:39 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಂಜನಗೂಡು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ

01/05/2024, 15:48

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕನ್ನಡ ಸಾಹಿತ್ಯ ಪರಿಷತ್ತು ನಂಜನಗೂಡು ಘಟಕದ ವತಿಯಿಂದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು.
ಸಂಘದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅನಾರೋಗ್ಯದಿಂದ ಮೊನ್ನೆ ಸಾವಿಗೀಡಾದ ಚಾಮರಾಜನಗರ ಸಂಸದ ವಿ ಶ್ರೀನಿವಾಸಪ್ರಸಾದ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮೇಣದಬತ್ತಿ ಹಚ್ಚಿ ಮೌನಾಚರಣೆ ಆಚರಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಗೌರವಾಧ್ಯಕ್ಷ ಚಿಕ್ಕರಂಗನಾಯಕ, ಅಧ್ಯಕ್ಷೆ ಲತಾ ಮುದ್ದುಮೋಹನ್ ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಗಲಿದ ತಮ್ಮ ನೆಚ್ಚಿನ ನಾಯಕನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಪರಿಷತ್ತಿನ ತಾಲೂಕು ಘಟಕದ ಗೌರವಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಅಧ್ಯಕ್ಷೆ ಲತಾ ಮುದ್ದುಮೋಹನ್ ಮಾತನಾಡಿ
ಶ್ರೀನಿವಾಸ್ ಪ್ರಸಾದ್ ಅವರು ಒಬ್ಬ ವ್ಯಕ್ತಿಯಾಗಿರಲಿಲ್ಲ. ಒಂದು ಶಕ್ತಿಯಾಗಿದ್ದರು. ಕಳೆದ 50 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಆರು ಬಾರಿ ಸಂಸದರಾಗಿ, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿ ಶೋಷಿತ ಹಾಗೂ ದಲಿತರ ಧ್ವನಿಯಾಗಿದ್ದರು. ಅವರ ಸ್ವಾಭಿಮಾನಕ್ಕೆ ಧಕ್ಕೆ ಅದಾಗಲೆಲ್ಲ ಪಕ್ಷ ಬಿಟ್ಟು ಬೇರೆ ಪಕ್ಷ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಿದ್ದರು. ಅವರ ಸುದೀರ್ಘ ರಾಜಕಾರಣದಲ್ಲಿ ಶುದ್ಧ ಹಸ್ತರಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದಂತಹ ಮಹಾನ್ ವ್ಯಕ್ತಿಯಾಗಿದ್ದರು ಎಂದು ಅವರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ರಂಗಸ್ವಾಮಿ, ಪ್ರಭಾಕರ್, ಶೋಭಾ, ಬಿಳಿಕೆರೆ ಹೋಬಳಿ ಅಧ್ಯಕ್ಷೆ ಮಂಜುಳಾ, ಕಸಬಾ ಹೋಬಳಿ ಅಧ್ಯಕ್ಷೆ ಮಂಜುಳಾ ಅರಸ್, ಸತೀಶ್ ದಳವಾಯಿ, ಸಿದ್ದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು