6:26 AM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವಕ್ಕೆ ಚಾಲನೆ

16/12/2024, 21:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಯಿತು.


ಡಿಸೆಂಬರ್ 16ರಿಂದ 26ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಬ್ರಹ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಶಬರಿಮಲೆ ಪ್ರಧಾನ ಅರ್ಚಕರಾದ ಶ್ರೀಕಂಠ ರಾಜೀವರು ತಂತ್ರಿಗಳ ಮಾರ್ಗದರ್ಶನದಲ್ಲಿ ಇಂದು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಧ್ವಜಸ್ತಂಬಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧ್ವಜಾರೋಹಣ ಮಾಡಲಾಯಿತು.
ಇಂದು ಬೆಳಗ್ಗೆಯಿಂದಲೇ ಶ್ರೀ ಸ್ವಾಮಿ ಅಯ್ಯಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಅಶ್ವದ ಲಾಂಛನ ಹೊಂದಿರುವ ಧ್ವಜವನ್ನು ಅಯ್ಯಪ್ಪ ಭಕ್ತರ ಹರ್ಷೋದ್ಗಾರದೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಬಳಿಕ ದೇವಾಲಯದ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿ ಮಾತನಾಡಿ 10 ದಿನಗಳ ಕಾಲ ನಡೆಯುವ ಬ್ರಹ್ಮೋತ್ಸವಕ್ಕೆ ಇಂದು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ನಾಳೆ 17ರಂದು ವಿಶೇಷ ಪಡಿ ಪೂಜೆ 20ರಂದು ಬೃಹತ್ ಅನ್ನ ಸಂತರ್ಪಣೆ ಹಾಗೂ ರಾಜಭೀದಿಗಳಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮತ್ತು ತೆಪ್ಪೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಉಳಿದಂತೆ ಪ್ರತಿನಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಹಾಗಾಗಿ ಬ್ರಹ್ಮೋತ್ಸವದ ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಪುರ ಪ್ರಮುಖರು ಅಯ್ಯಪ್ಪ ಸ್ವಾಮಿ ಭಕ್ತರುಗಳಾದ ಮಂಜುನಾಥ್, ಮೋಹನ್, ನಾರಾಯಣಪ್ಪ, ಡಾ., ರಾಘವೇಂದ್ರ, ಶ್ರೀಧರ್, ನಾಗರಾಜ್ , ವೆಂಕಟೇಶ್, ನಾರಾಯಣ ರೆಡ್ಡಿ, ಗಿರೀಶ್, ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು