2:18 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವಕ್ಕೆ ಚಾಲನೆ

16/12/2024, 21:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಯಿತು.


ಡಿಸೆಂಬರ್ 16ರಿಂದ 26ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಬ್ರಹ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಶಬರಿಮಲೆ ಪ್ರಧಾನ ಅರ್ಚಕರಾದ ಶ್ರೀಕಂಠ ರಾಜೀವರು ತಂತ್ರಿಗಳ ಮಾರ್ಗದರ್ಶನದಲ್ಲಿ ಇಂದು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಧ್ವಜಸ್ತಂಬಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧ್ವಜಾರೋಹಣ ಮಾಡಲಾಯಿತು.
ಇಂದು ಬೆಳಗ್ಗೆಯಿಂದಲೇ ಶ್ರೀ ಸ್ವಾಮಿ ಅಯ್ಯಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಅಶ್ವದ ಲಾಂಛನ ಹೊಂದಿರುವ ಧ್ವಜವನ್ನು ಅಯ್ಯಪ್ಪ ಭಕ್ತರ ಹರ್ಷೋದ್ಗಾರದೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಬಳಿಕ ದೇವಾಲಯದ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿ ಮಾತನಾಡಿ 10 ದಿನಗಳ ಕಾಲ ನಡೆಯುವ ಬ್ರಹ್ಮೋತ್ಸವಕ್ಕೆ ಇಂದು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ನಾಳೆ 17ರಂದು ವಿಶೇಷ ಪಡಿ ಪೂಜೆ 20ರಂದು ಬೃಹತ್ ಅನ್ನ ಸಂತರ್ಪಣೆ ಹಾಗೂ ರಾಜಭೀದಿಗಳಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮತ್ತು ತೆಪ್ಪೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಉಳಿದಂತೆ ಪ್ರತಿನಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಹಾಗಾಗಿ ಬ್ರಹ್ಮೋತ್ಸವದ ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಪುರ ಪ್ರಮುಖರು ಅಯ್ಯಪ್ಪ ಸ್ವಾಮಿ ಭಕ್ತರುಗಳಾದ ಮಂಜುನಾಥ್, ಮೋಹನ್, ನಾರಾಯಣಪ್ಪ, ಡಾ., ರಾಘವೇಂದ್ರ, ಶ್ರೀಧರ್, ನಾಗರಾಜ್ , ವೆಂಕಟೇಶ್, ನಾರಾಯಣ ರೆಡ್ಡಿ, ಗಿರೀಶ್, ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು