5:46 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ನಂಜನಗೂಡು: ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ವೈಕುಂಠ ವೈಭವ

11/01/2025, 23:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲ ಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.
ನಿನ್ನೆಯಿಂದಲೇ ದೇವಾಲಯದಲ್ಲಿ ಹೋಮ ಹವನಗಳು ನಡೆದು ಶುಕ್ರವಾರ ಬೆಳಿಗ್ಗೆಯಿಂದಲೇ ಶ್ರೀ ಅಲಮೇಲು ಮಂಗಮ್ಮ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಅವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನಡೆಸಲಾಯಿತು.
ದೇವಾಲಯಕ್ಕೆ ಹುಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.


ಇದೇ ಸಂದರ್ಭ ದೇವಾಲಯದ ವತಿಯಿಂದ ನಿರ್ಮಿಸಲಾಗಿದ್ದ ವೈಕುಂಠ ದ್ವಾರವನ್ನು ಪ್ರವೇಶಿಸಿ ಸುವ ಮೂಲಕ ವೈಕುಂಠ ಏಕಾದಶಿಯನ್ನು ಏಕಾಗ್ರತೆಯಿಂದ ಆಚರಿಸಿದ ಭಕ್ತರು ಶ್ರೀ ವೆಂಕಟೇಶ್ವರನಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ಒಳ ಹಾಗೂ ಹೊರ ಆವರಣಗಳನ್ನು ಬಣ್ಣ ಬಣ್ಣದ ಹೂ ಹಾಗು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕಾರಿಕಲಾಗಿತ್ತು.
ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಲಾಡು ಸೇರಿದಂತೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಸಂಸ್ಥಾಪಕ ಸದಸ್ಯರಾದ ವಕೀಲ ಶ್ರೀನಿವಾಸ ರೆಡ್ಡಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ದೇವಾಲಯದ ಸಂಸ್ಥಾಪಕರಾದ ಶ್ರೀ ವಿಜಯಲಕ್ಷ್ಮಿ, ನಾರಾಯಣ ರೆಡ್ಡಿ, ಡಾ.ಕುಮಾರ್, ಸೇರಿದಂತೆ ಕುಟುಂಬ ವರ್ಗದವರು ಹಾಗೂ ಪುರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು