2:03 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ನಂಜನಗೂಡು: ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ವೈಕುಂಠ ವೈಭವ

11/01/2025, 23:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲ ಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.
ನಿನ್ನೆಯಿಂದಲೇ ದೇವಾಲಯದಲ್ಲಿ ಹೋಮ ಹವನಗಳು ನಡೆದು ಶುಕ್ರವಾರ ಬೆಳಿಗ್ಗೆಯಿಂದಲೇ ಶ್ರೀ ಅಲಮೇಲು ಮಂಗಮ್ಮ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಅವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನಡೆಸಲಾಯಿತು.
ದೇವಾಲಯಕ್ಕೆ ಹುಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.


ಇದೇ ಸಂದರ್ಭ ದೇವಾಲಯದ ವತಿಯಿಂದ ನಿರ್ಮಿಸಲಾಗಿದ್ದ ವೈಕುಂಠ ದ್ವಾರವನ್ನು ಪ್ರವೇಶಿಸಿ ಸುವ ಮೂಲಕ ವೈಕುಂಠ ಏಕಾದಶಿಯನ್ನು ಏಕಾಗ್ರತೆಯಿಂದ ಆಚರಿಸಿದ ಭಕ್ತರು ಶ್ರೀ ವೆಂಕಟೇಶ್ವರನಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ಒಳ ಹಾಗೂ ಹೊರ ಆವರಣಗಳನ್ನು ಬಣ್ಣ ಬಣ್ಣದ ಹೂ ಹಾಗು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕಾರಿಕಲಾಗಿತ್ತು.
ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಲಾಡು ಸೇರಿದಂತೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಸಂಸ್ಥಾಪಕ ಸದಸ್ಯರಾದ ವಕೀಲ ಶ್ರೀನಿವಾಸ ರೆಡ್ಡಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ದೇವಾಲಯದ ಸಂಸ್ಥಾಪಕರಾದ ಶ್ರೀ ವಿಜಯಲಕ್ಷ್ಮಿ, ನಾರಾಯಣ ರೆಡ್ಡಿ, ಡಾ.ಕುಮಾರ್, ಸೇರಿದಂತೆ ಕುಟುಂಬ ವರ್ಗದವರು ಹಾಗೂ ಪುರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು