3:08 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ವೈಕುಂಠ ವೈಭವ

11/01/2025, 23:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲ ಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.
ನಿನ್ನೆಯಿಂದಲೇ ದೇವಾಲಯದಲ್ಲಿ ಹೋಮ ಹವನಗಳು ನಡೆದು ಶುಕ್ರವಾರ ಬೆಳಿಗ್ಗೆಯಿಂದಲೇ ಶ್ರೀ ಅಲಮೇಲು ಮಂಗಮ್ಮ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಅವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನಡೆಸಲಾಯಿತು.
ದೇವಾಲಯಕ್ಕೆ ಹುಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.


ಇದೇ ಸಂದರ್ಭ ದೇವಾಲಯದ ವತಿಯಿಂದ ನಿರ್ಮಿಸಲಾಗಿದ್ದ ವೈಕುಂಠ ದ್ವಾರವನ್ನು ಪ್ರವೇಶಿಸಿ ಸುವ ಮೂಲಕ ವೈಕುಂಠ ಏಕಾದಶಿಯನ್ನು ಏಕಾಗ್ರತೆಯಿಂದ ಆಚರಿಸಿದ ಭಕ್ತರು ಶ್ರೀ ವೆಂಕಟೇಶ್ವರನಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ಒಳ ಹಾಗೂ ಹೊರ ಆವರಣಗಳನ್ನು ಬಣ್ಣ ಬಣ್ಣದ ಹೂ ಹಾಗು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕಾರಿಕಲಾಗಿತ್ತು.
ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಲಾಡು ಸೇರಿದಂತೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಸಂಸ್ಥಾಪಕ ಸದಸ್ಯರಾದ ವಕೀಲ ಶ್ರೀನಿವಾಸ ರೆಡ್ಡಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ದೇವಾಲಯದ ಸಂಸ್ಥಾಪಕರಾದ ಶ್ರೀ ವಿಜಯಲಕ್ಷ್ಮಿ, ನಾರಾಯಣ ರೆಡ್ಡಿ, ಡಾ.ಕುಮಾರ್, ಸೇರಿದಂತೆ ಕುಟುಂಬ ವರ್ಗದವರು ಹಾಗೂ ಪುರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು