1:37 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ನಂಜನಗೂಡು: ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ

08/12/2024, 11:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಿಕ್ಷಣ ಹಾಗೂ ಆರೋಗ್ಯ ಇಲಾಖೆ, ತಾಲೂಕು ಪಂಚಾಯತಿ ಮತ್ತು ಅಲೀಂ ಕೋ ಸಹಯೋಗದೊಂದಿಗೆ ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಎಚ್. ಡಿ ಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು,
ತಾಲೂಕು ದಂಡಾಧಿಕಾರಿಗಳಾದ ಶ್ರೀನಿವಾಸ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ತಾಲೂಕು ಆಡಳಿತದಿಂದ ವಿಶ್ವ ವಿಕಲಚೇತನರ ದಿನದ ಶುಭಾಶಯಗಳನ್ನು ಕೋರಿ, ಸರ್ಕಾರದ ಸವಲತ್ತುಗಳು ಹಾಗೂ ಸಲಕರಣೆಗಳನ್ನು ಪಡೆಯುವ ಮೂಲಕ ಅವರನ್ನು ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವಂತೆ ಪೋಷಕರಿಗೆ ಕರೆ ನೀಡಿದರು,ಇದೇ ಸಂದರ್ಭ ತಾಲೋಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ವಿಷೇಶ ಚೇತನ ಮಕ್ಕಳಾಗಿ ಹುಟ್ಟುವುದು ಯಾವುದೇ ಶಾಪವಲ್ಲ, ಅದು ಗರ್ಭ ವ್ಯವಸ್ಥೆಯಲ್ಲಿ ಹಾಗೂ ಹೆರಿಗೆ ಸಮಯದಲ್ಲಿ ಆಗುವ ಏರುಪೇರಿನಿಂದ ಇಂತಹ ಮಕ್ಕಳು ಜನಿಸುತ್ತಾರೆ. ಇಂತಹ ಮಕ್ಕಳ ಲಾಲನೆ ಪಾಲನೆ ಮಾಡುವ ಪೋಷಕರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು,
ಈ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಜಿಲ್ಲೆಯಿಂದ ತಜ್ಞ ವೈದ್ಯರನ್ನು,ನಿಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಹಾಗಾಗಿ ಪೋಷಕರು,ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.


ಕಾರ್ಯಕ್ರಮದಲ್ಲಿ ತಾಲೋಕು ಪಂಚಾಯತಿ ಇಒ ರಘುನಂದನ್, ಮುತ್ತುರಾಜು, ಬಿಆರ್ ಸಿ ಕೃಷ್ಣಯ್ಯ, ಆರ್ ಬಿ ಎಸ್ ಕೆ ವೈದ್ಯರು ಮತ್ತು ತಂಡ, ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು