10:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ

26/11/2024, 14:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದ ಹಳೆಯದಾದ ಹಾಗೂ ಪುರಾಣ ಪ್ರಸಿದ್ಧ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ದೀಪೋತ್ಸವ ಹಾಗೂ ನೂತನ ಕೊಳಗ ದಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಇದೇ ಸಂದರ್ಭ ನಂಜನಗೂಡಿನ ವೈದ್ಯ ದಂಪತಿಗಳಾದ ಡಾ. ಗೀತಾ ಹಾಗೂ ಡಾ. ರವಿ ಅವರು ನೂತನವಾಗಿ ಮಾಡಿಸಿಕೊಟ್ಟ ಹಿತ್ತಾಳೆ ಕವಚದ ಮೂರ್ತಿಯನ್ನು ಧಾರಣೆ ಮಾಡಿ ಬಣ್ಣದ ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೀಪ ಹಚ್ಚುವ ಮೂಲಕ ದೇವರ ದರ್ಶನ ಪಡೆದು ತಮ್ಮ ಭಕ್ತಿ ನಮನ ಸಲ್ಲಿಸಿದರು. ಗ್ರಾಮದ ಯುವಕರ ನೇತೃತ್ವದಲ್ಲಿ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಾಲಯದ ಪಾರುಪತ್ತೆಗಾರ ಜಯರಾಮ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿ ಶಿಥಿಲ ಗೊಳ್ಳುತ್ತಿರುವ ಆನಾದಿಕಾಲದ ಇಂತಹ ಪುರಾತನ ಪರಂಪರೆ ಉಳ್ಳ ದೇವಾಲಯಗಳ ರಕ್ಷಣೆಗೆ ತಾಲೂಕು ಮತ್ತು ಜಿಲ್ಲಾಡಳಿತ ಹಾಗೂ ಸಾರ್ವಜನಿಕರು ಮುಂದಾಗಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು